Select Your Language

Notifications

webdunia
webdunia
webdunia
webdunia

ರಾಜ್ಯ ಸಂಪುಟಕ್ಕೆ ಮೋದಿ ಸೂತ್ರ?

ಸಂಪುಟ
ನವದೆಹಲಿ :  ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್ ಪ್ಲಾನ್ ಹೆಣೆದಿದೆ.
 

ಅನೇಕ ದಿನಗಳಿಂದ ಸದ್ದು ಮಾಡುತ್ತಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆಯೂ ಹೊಸ ಮುಖಗಳು, ಭವಿಷ್ಯದ ನಾಯಕರಾಗಬಲ್ಲವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್ ದೂರದೃಷ್ಟಿಯ ಸೂತ್ರ ಅಳವಡಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ.

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕಾಗಿ ಪಕ್ಷ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ. ಹಾಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಮಾಸಾಂತ್ಯಕ್ಕೆ ಅದು ಮುಕ್ತಾಯಗೊಳ್ಳಲಿದೆ.

ಆ ನಂತರ ಸಂಪುಟ ಕಸರತ್ತು ಚುರುಕಾಗುವ ನಿರೀಕ್ಷೆ ಇದ್ದು, ಕೆಲ ಹಿರಿಯರನ್ನು ಕೈಬಿಡುವ ಸಾಧ್ಯತೆ ಬಗ್ಗೆ ಈಗಾಗಲೇ ಗುಸುಗುಸು ದಟ್ಟವಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾಮಾಣಿಕವಾಗಿ ಸರ್ಕಾರ ನಡೆಸಲಿದ್ದಾರೆ: ಕೇಜ್ರಿವಾಲ್