Webdunia - Bharat's app for daily news and videos

Install App

ಸಂಪುಟ ರಚನೆಗೆ ಮೋದಿ ಮಾಸ್ಟರ್ ಪ್ಲಾನ್..!

Webdunia
ಶುಕ್ರವಾರ, 18 ಮಾರ್ಚ್ 2022 (14:25 IST)
ನವದೆಹಲಿ :  ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್ ಪ್ಲಾನ್ ಹೆಣೆದಿದೆ.

2024ರಲ್ಲೂ ಕೇಂದ್ರದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂಬ ಉದ್ದೇಶದಿಂದ ಯುವ ನಾಯಕರಿಗೆ ಆದ್ಯತೆ ನೀಡುವುದೂ ಸೇರಿದಂತೆ 4 ರಾಜ್ಯಗಳ ಸಚಿವ ಸಂಪುಟ ರಚನೆಯನ್ನು ಬಹಳ ಲೆಕ್ಕಾಚಾರದಿಂದ ಮಾಡಲು ಯೋಜಿಸಿದೆ.

ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಇದಕ್ಕೆ ರೂಪುರೇಷೆಗಳನ್ನು ಹಾಕಿಕೊಟ್ಟಿದ್ದು, ಅದರಂತೆಯೇ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಷ್ಟ್ರಮಟ್ಟದ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಉತ್ತರಪ್ರದೇಶ, ಉತ್ತರಾಖಂಡ, ಗೋವಾ ಹಾಗೂ ಮಣಿಪುರದಲ್ಲಿ ನೂತನ ಸಚಿವರ ಆಯ್ಕೆ ವೇಳೆ ಜಾತಿ, ವಲಯವಾರು ಪ್ರಾತಿನಿಧ್ಯ, ಎಸ್ಸಿ/ಎಸ್ಟಿ, ಒಬಿಸಿಗೆ ಪ್ರಾತಿನಿಧ್ಯ, ಮಹಿಳೆಯರು, ಶೈಕ್ಷಣಿಕ ಹಿನ್ನೆಲೆ ಮತ್ತು ವಿಶೇಷವಾಗಿ ಯುವ ಸಮೂಹವನ್ನು ಗಮನದಲ್ಲಿಟ್ಟುಕೊಳ್ಳಲು ನಿರ್ಧರಿಸಲಾಗಿದೆ.

ಈ ಸಂಬಂಧ ಈಗಾಗಲೇ ಉತ್ತರಪ್ರದೇಶ, ಮಣಿಪುರ, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳ ಪೂರ್ಣ ವಿವರ ರವಾನಿಸುವಂತೆ ದಿಲ್ಲಿ ನಾಯಕರು ನಾಲ್ಕೂ ರಾಜ್ಯಗಳ ಪಕ್ಷದ ಘಟಕಗಳಿಗೆ ಸೂಚಿಸಿದ್ದಾರೆ.

ಅದರಲ್ಲೂ, ‘ಸಂಪುಟಕ್ಕೆ ಯುವಕರ ಆಯ್ಕೆ ವೇಳೆ ಮುಂದಿನ 25 ವರ್ಷದಲ್ಲಿ ಅವರು ರಾಜ್ಯದಲ್ಲಿ ಪಕ್ಷದ ಹೊಸ ನಾಯಕತ್ವ ಒದಗಿಸುವಂಥ ಶಕ್ತಿ ಹೊಂದಿರಬೇಕು. ಅಂಥವರಿಗೆ ಆದ್ಯತೆ ನೀಡಬೇಕು’ ಎಂದು ಇತ್ತೀಚೆಗೆ ಈ ಕುರಿತು ನಡೆದ ಸಭೆಯಲ್ಲಿ ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನೇನು ಯೋಚನೆ?
1.ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ
2. ಈ 4 ರಾಜ್ಯಗಳಲ್ಲಿ ಸಂಪುಟ ರಚನೆ ವೇಳೆ ಜಾತಿ, ವಲಯವಾರು ಪ್ರಾತಿನಿಧ್ಯ ಹಂಚಿಕೆ
3. ಎಸ್ಸಿ-ಎಸ್ಟಿ, ಒಬಿಸಿ ಜತೆ ಸ್ತ್ರೀಯರು, ಉತ್ತಮ ಶೈಕ್ಷಣಿಕ ಹಿನ್ನೆಲೆ ಇರುವವರಿಗೂ ಆದ್ಯತೆ
4. ವಿಶೇಷವಾಗಿ ಯುವ ಸಮೂಹವನ್ನು ಗಮನದಲ್ಲಿಟ್ಟು ಸಂಪುಟ ರಚನೆಗೆ ತೀರ್ಮಾನ
5. 60 ಸದಸ್ಯರ ಉತ್ತರ ಪ್ರದೇಶ ಸಂಪುಟದಲ್ಲಂತೂ 20 ಜನ ಹೊಸಬರಿಗೆ ಸ್ಥಾನ ಸಾಧ್ಯತೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments