Webdunia - Bharat's app for daily news and videos

Install App

ವಿಭಿನ್ನ ಗುಣದ 35 ಬೆಳೆ ತಳಿಗಳನ್ನು ಬಿಡುಗಡೆ ಮಾಡಿದ ಮೋದಿ

Webdunia
ಮಂಗಳವಾರ, 28 ಸೆಪ್ಟಂಬರ್ 2021 (14:55 IST)
ನವದೆಹಲಿ : ತಾಪಮಾನ ಬದಲಾವಣೆ ಮತ್ತು ಪೌಷ್ಟಿಕಾಂಶ ಕೊರತೆಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿಭಿನ್ನ ಗುಣಲಕ್ಷಣಗಳುಳ್ಳ 35 ಬೆಳೆಗಳ ತಳಿಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು.

ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಇವನ್ನು ಅಭಿವೃದ್ಧಿಪಡಿಸಿದೆ. ಐಸಿಎಆರ್, ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ವಿ.ವಿಗಳಲ್ಲಿ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲಿ ಮಂಗಳವಾರ ಬಿಡುಗಡೆ ಮಾಡಲಾಯಿತು.
ಪ್ರಧಾನಮಂತ್ರಿ ಕಚೇರಿಯ ಹೇಳಿಕೆಯನುಸಾರ, ಅಭಿವೃದ್ಧಿ ಪಡಿಸಲಾಗಿರುವ ನೂತನ ತಳಿಗಳು ತಾಪಮಾನ ಬದಲಾವಣೆ ಸವಾಲು ಎದುರಿಸಲು ಪೂರಕವಾದ ಸ್ಥಿತಿಸ್ಥಾಪಕತ್ವ, ಅತ್ಯಧಿಕ ಪೌಷ್ಟಿಕಾಂಶವನ್ನು ಒಳಗೊಂಡಿದೆ.
ಬರಗಾಲದ ಸಹಿಷ್ಣು ಮಾದರಿಯ ಕಡಲೆ, ಬೀಜ ನಿರೋಧಕ ಗುಣವುಳ್ಳ ತೊಗರಿ, ತ್ವರಿತವಾಗಿ ಫಸಲು ನೀಡುವ ಸೋಯಾಬೀನ್, ರೋಗನಿರೋಧಕ ಸಾಮರ್ಥ್ಯದ ಭತ್ತ, ಜೈವಿಕ ಬಲವರ್ಧಿತವಾದ ಗೋಧಿ, ಜೋಳ, ತೊಗರಿ, ರಾಗಿ, ನವಣೆ ಅಕ್ಕಿ, ಹುರುಳಿ ಬೆಳೆಗಳ ತಳಿಗಳು ಇವುಗಳಲ್ಲಿ ಸೇರಿವೆ.
ವಿಶೇಷ ಗುಣಗಳಿರುವ ಈ ತಳಿಗಳು ಪೌಷ್ಟಿಕಾಂಶ ನಿರೋಧಕ ಶಕ್ತಿಯನ್ನೂ ಹೊಂದಿವೆ. ಕೆಲವು ತಳಿಗಳಲ್ಲಿರುವ ಅಂಶಗಳು ಮನುಷ್ಯ, ಪ್ರಾಣಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದವು. ಇದು ಆ ಕೊರತೆ ನೀಗಿಸಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ದೇಶದಲ್ಲಿ ಶೇ 86ರಷ್ಟು ರೈತರು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರೇ ಆಗಿದ್ದಾರೆ. ಈ ಸಮೂಹದ ಕೃಷಿಕರ ಆದಾಯವನ್ನು ಹೆಚ್ಚಿಸುವುದು ಪ್ರಧಾನಮಂತ್ರಿಗಳ ಆದ್ಯತೆಯಾಗಿದೆ ಎಂದು ಪ್ರತಿಪಾದಿಸಿದರು.
ಈ ವರ್ಗದ ರೈತರ ಆದಾಯ ದುಪ್ಪಟ್ಟುಗೊಳಿಸಲು ಹಾಗೂ ಭಾರತವನ್ನು ಕೃಷಿ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿಸಲು ಈ ಮೂಲಕ ಕೃಷಿಕರಿಗೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ರಾಯ್ಪುರದಲ್ಲಿ ರಾಷ್ಟ್ರೀಯ ಜೈವಿಕ ಒತ್ತಡ ಸಹಿಷ್ಣು ಕೇಂದ್ರ (ಎನ್ಐಬಿಎಸ್ಟಿ) ಸ್ಥಾಪನೆಗಾಗಿ ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರು ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದರು.
ಕೇಂದ್ರ ಮೀನುಗಾರಿಕೆ, ಪಶು ಸಂಗೋಪನಾ ಸಚಿವ ಪರಶೋತ್ತಮ್ ರೂಪಾಲಾ, ಕೃಷಿ ಖಾತೆ ರಾಜ್ಯ ಸಚಿವರಾದ ಕೈಲಾಶ್ ಚೌಧರಿ, ಶೋಭಾ ಕರಂದ್ಲಾಜೆ, ಛತ್ತೀಸಗಡದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments