Webdunia - Bharat's app for daily news and videos

Install App

ಕರ್ನಾಟಕದಲ್ಲಿ ಮಾರ್ಗಸೂಚಿ ಪ್ರಕಟ

Webdunia
ಮಂಗಳವಾರ, 26 ಜುಲೈ 2022 (09:33 IST)
ಬೆಂಗಳೂರು : ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿನ 2 ಪ್ರಕರಣ ಪತ್ತೆಯಾಗಿದ್ದು, ದೇಶದ ಜನತೆಯಲ್ಲಿ ಭೀತಿ ಹುಟ್ಟಿಸಿದೆ.
 
ಮಂಕಿಪಾಕ್ಸ್ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಈ ಕುರಿತು ಜನತೆಯಲ್ಲಿ ಅರಿವು ಮೂಡಿಸಬೇಕು.

ವಿಮಾನ ನಿಲ್ದಾಣ, ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಕ್ರಮವಹಿಸಬೇಕು. ರೋಗ ಲಕ್ಷಣ ಇರುವವರ ಚಿಕಿತ್ಸೆ ಕುರಿತು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿರೋ ಮುನ್ನೆಚ್ಚರಿಕಾ ಕ್ರಮಗಳೇನು?
ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ವಿದೇಶದಿಂದ ಬರುವ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಕಡ್ಡಾಯ, ಸೋಂಕಿತ ಪ್ರದೇಶಗಳಿಂದ ಬಂದ ಜನರಿಗೆ ರೋಗ ಲಕ್ಷಣ ಇದೆಯಾ ಅಂತಾ ಪತ್ತೆ ಹಚ್ಚುವುದು, ರೋಗ ಲಕ್ಷಣರಹಿತ ವ್ಯಕ್ತಿಗಳ ವಿವರ ಕಡ್ಡಾಯವಾಗಿ ದಾಖಲಿಸಬೇಕು. ಏನಾದ್ರು ಸೋಂಕಿನ ಲಕ್ಷಣ ಕಾಣಿಸಿಕೊಳ್ಳುತ್ತಾ ಅಂತಾ 21 ದಿನಗಳ ಕಾಲ ನಿಗಾ ವಹಿಸಬೇಕು. 

ಮಂಕಿಪಾಕ್ಸ್ ಸೋಂಕಿನ ಶಂಕಿತರನ್ನು ಬೆಂಗಳೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿ ನಿಗಾ ವಹಿಸಬೇಕು. ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು 21 ದಿನಗಳ ಕಾಲ ಐಸೊಲೇಟ್ ಮಾಡಿ ನಿಗಾವಹಿಸಬೇಕು. ಸೋಂಕು ಕಂಡು ಬಂದರೆ ಪ್ರತ್ಯೇಕವಾಗಿ ಐಸೂಲೇಟ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments