ಇಂದಿನಿಂದ ವಿಧಾನಮಂಡಲ ಮಳೆಗಾಲದ ಅಧಿವೇಶನ

Webdunia
ಸೋಮವಾರ, 12 ಸೆಪ್ಟಂಬರ್ 2022 (08:58 IST)
ಬೆಂಗಳೂರು : ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.

ಮಳೆ ಹೊತ್ತಲ್ಲಿ ಬೆಂಗಳೂರಿನ ನಿರ್ವಹಣೆ, ಪ್ರವಾಹ ಪರಿಹಾರ ವಿತರಣೆಯ ಲೋಪ, ಬ್ರ್ಯಾಂಡ್ ಬೆಂಗಳೂರಿಗೆ ಹೊಡೆತ, 40 ಪರ್ಸೆಂಟ್ ಕಮಿಷನ್, ಪಿಎಸ್ಐ ನೇಮಕಾತಿ ಹಗರಣ, ಹೆಚ್ಚುತ್ತಿರುವ ಕೋಮು ಸಂಘರ್ಷ,

ಕಾನೂನು ಸುವ್ಯವಸ್ಥೆ ಕುಸಿತ, ಲಿಂಬಾವಳಿ ದರ್ಪ ಹೀಗೆ ಸಾಲು ಸಾಲು ವಿಚಾರಗಳ ಬಗ್ಗೆ ಪಟ್ಟಿ ಮಾಡಿಕೊಂಡಿರುವ ʻಕೈʼ ಪಡೆ, ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧತೆ ನಡೆಸಿದೆ. ಆರಂಭದಿಂದಲೇ ಕಲಾಪ ಕಾವೇರುವ ಸಾಧ್ಯತೆ ಇದ್ದು, ಸರ್ಕಾರದ ವಿರುದ್ಧ ಮಳೆ ಸಮಸ್ಯೆ ನಿರ್ವಹಣೆ, 40% ಭ್ರಷ್ಟಾಚಾರ ಆರೋಪದ ಶಸ್ತ್ರಗಳನ್ನು ಝಳಪಿಸಲು ವಿಪಕ್ಷ ಕಾಂಗ್ರೆಸ್ ಸಿದ್ಧವಾಗಿದೆ.

ಆದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯ ಕೇಸ್ಗಳನ್ನ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮುಂದಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments