Webdunia - Bharat's app for daily news and videos

Install App

ಇಂದು ಖಗ್ರಾಸ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ

Webdunia
ಶುಕ್ರವಾರ, 27 ಜುಲೈ 2018 (09:07 IST)
ಬೆಂಗಳೂರು: ಶತಮಾನದ ಸುದೀರ್ಘ ಖಗ್ರಾಸ ಚಂದ್ರಗ್ರಹಣ ಇಂದು ಸಂಭವಿಸಲಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆ, ಹವನಗಳು ನಡೆಯಲಿವೆ.
 

ಇಂದು ರಾತ್ರಿ 11.45 ರ ನಂತರ ಚಂದ್ರಗ್ರಹಣ ನಡೆಯಲಿದ್ದು, ಬೆಳಿಗ್ಗೆ 4 ಗಂಟೆಯವರೆಗೂ ಗ್ರಹಣ ಕಾಲವಿರುತ್ತದೆ. ಚಂದ್ರ ಕೇಸರಿ ಬಣ್ಣದಲ್ಲಿ ಗೋಚರಿಸುವುದು ಇಂದಿನ ವಿಶೇಷತೆ.

ಗ್ರಹಣದ ಪ್ರಯುಕ್ತ ನಾಡಿನ ವಿವಿಧ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಗಳು ನಡೆಯಲಿವೆ. ಇನ್ನು ಕೆಲವೆಡೆ ಪೂಜಾ ಸಮಯದಲ್ಲಿ ಬದಲಾವಣೆಯಾಗಲಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲಿ ಇಂದು ಸಂಜೆ ಬೇಗನೇ ದೇವರ ದರ್ಶನ ನಡೆಯಲಿದೆ. ರಾತ್ರಿ ಪೂಜೆ ಬೇಗನೇ ನಡೆಯುವುದು. ಹೊರನಾಡಿನಲ್ಲಿ ಪೂಜೆ ಎಂದಿನಂತೆ ನಡೆಯುವುದಿದ್ದರೂ ರಾತ್ರಿ ಭೋಜನ ವ್ಯವಸ್ಥೆ ಇರುವುದಿಲ್ಲ.

ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇವಾಲಯ, ನಿಮಿಷಾಂಬ ದೇವಾಲಯ, ಚಂದ್ರಮೌಳೇಶ್ವರ ದೇವಾಲಯಗಳಲ್ಲಿ ಸಂಜೆಯವರೆಗೆ ಮಾತ್ರ ದೇವರ ದರ್ಶನ ವ್ಯವಸ್ಥೆಯಿರುತ್ತದೆ. ನಾಡದೇವತೆ ಚಾಮುಂಡೇಶ್ವರಿ ದೇವಾಲಯದಲ್ಲೂ ರಾತ್ರಿ 9.30 ಕ್ಕೆ ಬಾಗಿಲು ಬಂದ್ ಆಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments