Webdunia - Bharat's app for daily news and videos

Install App

ಟಿವಿ ಚರ್ಚೆಗಳಿಂದಲೇ ಹೆಚ್ಚಿನ ಮಾಲಿನ್ಯ:ಸುಪ್ರೀಂ ತರಾಟೆ!?

Webdunia
ಶನಿವಾರ, 20 ನವೆಂಬರ್ 2021 (09:13 IST)
ಹೊಸದಿಲ್ಲಿ : ದಿಲ್ಲಿ ವಾಯುಮಾಲಿನ್ಯದ ಕುರಿತು ವಸ್ತುಸ್ಥಿತಿಯಾಚೆಗಿನ ಅಭಿಪ್ರಾಯಗಳನ್ನು ಮಂಡಿಸುತ್ತಿರುವ ಟಿವಿ ಚಾನೆಲ್ಗಳ ಚರ್ಚೆಗಳ ವಿರುದ್ಧ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಿವಿ ವಾಹಿನಿಗಳಲ್ಲಿನ ಸಂವಾದಗಳು ಎಲ್ಲಕ್ಕಿಂತಲೂ ಹೆಚ್ಚು ಮಾಲಿನ್ಯ ಉಂಟುಮಾಡುತ್ತಿವೆ ಎಂದು ಸಿಜೆಐ ಟೀಕಿಸಿದ್ದಾರೆ. ನ್ಯಾಯಾಲಯ ಕಂಡುಕೊಳ್ಳುವ ಸಣ್ಣಪುಟ್ಟ ಸಂಗತಿಗಳನ್ನೂ ದೊಡ್ಡ ವಿವಾದವನ್ನಾಗಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ದಿಲ್ಲಿ ವಾಯು ಮಾಲಿನ್ಯ ಪರಿಸ್ಥಿತಿಯ ಕುರಿತು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಸಿಜೆಐ ಎನ್ವಿ ರಮಣ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 'ನೀವು ಕೆಲವು ವಿವಾದಗಳನ್ನು ಬಳಸಲು, ನಾವು ಅದನ್ನು ಗಮನಿಸಲು ಹಾಗೂ ಬಳಿಕ ಅದನ್ನು ವಿವಾದವನ್ನಾಗಿಸಲು ಬಯಸುತ್ತೀರಿ. ನಂತರ ಕೆಸರೆರಚಾಟ ಒಂದೇ ಉಳಿಯುತ್ತದೆ. ಎಲ್ಲರಿಗಿಂತಲೂ ಟಿವಿ ಚಾನೆಲ್ಗಳ ಚರ್ಚೆಗಳು ಹೆಚ್ಚು ಮಾಲಿನ್ಯ ಸೃಷ್ಟಿಸುತ್ತಿವೆ' ಎಂದು ಕಿಡಿಕಾರಿದ್ದಾರೆ.
ದಿಲ್ಲಿ ವಾಯು ಮಾಲಿನ್ಯಕ್ಕೆ ಕೂಳೆ ಸುಡುವುದರ ಕೊಡುಗೆ ಇದೆ ಎಂಬ ವಿಚಾರದಲ್ಲಿ ಟೆಲಿವಿಷನ್ ಚರ್ಚೆಗಳು ಸುಪ್ರೀಂಕೋರ್ಟ್ ಅನ್ನು ದಾರಿತಪ್ಪಿಸುತ್ತಿವೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರಸ್ತಾಪಿಸಿದರು. ಇದಕ್ಕೆ ಸಿಜೆಐ, 'ನಮ್ಮನ್ನು ತಪ್ಪುದಾರಿಗೆ ಎಳೆಯುತ್ತಿಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments