Webdunia - Bharat's app for daily news and videos

Install App

ಟಿವಿ ಚರ್ಚೆಗಳಿಂದಲೇ ಹೆಚ್ಚಿನ ಮಾಲಿನ್ಯ:ಸುಪ್ರೀಂ ತರಾಟೆ!?

Webdunia
ಶನಿವಾರ, 20 ನವೆಂಬರ್ 2021 (09:13 IST)
ಹೊಸದಿಲ್ಲಿ : ದಿಲ್ಲಿ ವಾಯುಮಾಲಿನ್ಯದ ಕುರಿತು ವಸ್ತುಸ್ಥಿತಿಯಾಚೆಗಿನ ಅಭಿಪ್ರಾಯಗಳನ್ನು ಮಂಡಿಸುತ್ತಿರುವ ಟಿವಿ ಚಾನೆಲ್ಗಳ ಚರ್ಚೆಗಳ ವಿರುದ್ಧ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಿವಿ ವಾಹಿನಿಗಳಲ್ಲಿನ ಸಂವಾದಗಳು ಎಲ್ಲಕ್ಕಿಂತಲೂ ಹೆಚ್ಚು ಮಾಲಿನ್ಯ ಉಂಟುಮಾಡುತ್ತಿವೆ ಎಂದು ಸಿಜೆಐ ಟೀಕಿಸಿದ್ದಾರೆ. ನ್ಯಾಯಾಲಯ ಕಂಡುಕೊಳ್ಳುವ ಸಣ್ಣಪುಟ್ಟ ಸಂಗತಿಗಳನ್ನೂ ದೊಡ್ಡ ವಿವಾದವನ್ನಾಗಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ದಿಲ್ಲಿ ವಾಯು ಮಾಲಿನ್ಯ ಪರಿಸ್ಥಿತಿಯ ಕುರಿತು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಸಿಜೆಐ ಎನ್ವಿ ರಮಣ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 'ನೀವು ಕೆಲವು ವಿವಾದಗಳನ್ನು ಬಳಸಲು, ನಾವು ಅದನ್ನು ಗಮನಿಸಲು ಹಾಗೂ ಬಳಿಕ ಅದನ್ನು ವಿವಾದವನ್ನಾಗಿಸಲು ಬಯಸುತ್ತೀರಿ. ನಂತರ ಕೆಸರೆರಚಾಟ ಒಂದೇ ಉಳಿಯುತ್ತದೆ. ಎಲ್ಲರಿಗಿಂತಲೂ ಟಿವಿ ಚಾನೆಲ್ಗಳ ಚರ್ಚೆಗಳು ಹೆಚ್ಚು ಮಾಲಿನ್ಯ ಸೃಷ್ಟಿಸುತ್ತಿವೆ' ಎಂದು ಕಿಡಿಕಾರಿದ್ದಾರೆ.
ದಿಲ್ಲಿ ವಾಯು ಮಾಲಿನ್ಯಕ್ಕೆ ಕೂಳೆ ಸುಡುವುದರ ಕೊಡುಗೆ ಇದೆ ಎಂಬ ವಿಚಾರದಲ್ಲಿ ಟೆಲಿವಿಷನ್ ಚರ್ಚೆಗಳು ಸುಪ್ರೀಂಕೋರ್ಟ್ ಅನ್ನು ದಾರಿತಪ್ಪಿಸುತ್ತಿವೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರಸ್ತಾಪಿಸಿದರು. ಇದಕ್ಕೆ ಸಿಜೆಐ, 'ನಮ್ಮನ್ನು ತಪ್ಪುದಾರಿಗೆ ಎಳೆಯುತ್ತಿಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments