Webdunia - Bharat's app for daily news and videos

Install App

ಇನ್ಮುಂದು ಸಾರಿಗೆ ನೌಕರರಿಗೆ ಹೆಚ್ಚುವರಿ ಕೆಲಸ

Webdunia
ಶನಿವಾರ, 10 ಸೆಪ್ಟಂಬರ್ 2022 (09:08 IST)
ತಿರುವನಂತಪುರಂ : ಕೇರಳ ರಾಜ್ಯ ಚೆಲ್ಲಿ ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಗೆ 12 ಗಂಟೆಗಳ ಕರ್ತವ್ಯ ವ್ಯವಸ್ಥೆ ಜಾರಿಗೊಳಿಸಲು ಕೇರಳದ ಎಲ್ಡಿಎಫ್ ಸರ್ಕಾರ ನಿರ್ಧರಿಸಿದೆ.
 
ಈಗಾಗಲೇ ಕೇರಳದಲ್ಲಿರುವ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಹಾಗಾಗಿ ನಷ್ಟದಲ್ಲಿ ಇರುವ ಸಾರಿಗೆ ಸಂಸ್ಥೆಯನ್ನು ಲಾಭದ ಹಳಿಗೆ ತರುವ ನಿಟ್ಟಿನಲ್ಲಿ ಈ ಕ್ರಮವೆಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. 

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಬೆಂಬಲಿತ ಟ್ರಾನ್ಸ್ಪೋರ್ಟ್ ಡೆಮಾಕ್ರಾಟಿಕ್ ಫೆಡರೇಷನ್  ಒಂದೇ ಹಂತದ ಕರ್ತವ್ಯದ ಅವಧಿಗೆ ಬೆಂಬಲ ಇದೆ, ಆದರೆ, 12 ಗಂಟೆಗಳ ಬದಲಾಗಿ 8 ಗಂಟೆ ಇರಲಿ ಎಂದಿದೆ. ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಜೊತೆಗೆ ವಾರದ 6 ದಿನ ಕರ್ತವ್ಯ ನಿರ್ವಹಿಸಲು ನೌಕರರಿಗೆ ಸರ್ಕಾರ ಅವಕಾಶ ಮಾಡಿಕೊಡಲಿದೆ.

ಈಗಾಗಲೇ ಸಿಬ್ಬಂದಿ ಕೊರತೆಯಿಂದ ಡಿಪೋಗಳಲ್ಲಿ ನಿಂತಿರುವ 1,300 ಬಸ್ಗಳ ಸೇವೆಯನ್ನು ಮತ್ತೆ ಆರಂಭಿಸಲು ಸರ್ಕಾರ ಚಿಂತಿಸಿದ್ದು, 8 ಗಂಟೆಗಳ ಕರ್ತವ್ಯಕ್ಕೆ ಬದಲಾಗಿ ನಾಲ್ಕು ಗಂಟೆ ಹೆಚ್ಚುವರಿ ಕರ್ತವ್ಯ ನಿರ್ವಹಿಸುವ ಬಸ್ ಸಿಬ್ಬಂದಿಗೆ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments