Webdunia - Bharat's app for daily news and videos

Install App

ನಾಳೆ ನಗರಸಭೆ ಫಲಿತಾಂಶ

Webdunia
ಬುಧವಾರ, 29 ಡಿಸೆಂಬರ್ 2021 (19:10 IST)
ಬೆಂಗಳೂರು : ಆನೇಕಲ್ ವಿಧಾನಸಭಾ ಕ್ಷೇತ್ರದ ಎರಡು ಪುರಸಭೆ ಮತ್ತು ಒಂದು ನಗರಸಭೆ ಚುನಾವಣೆಯ ಫಲಿತಾಂಶ ಗುರುವಾರ (ಡಿ 30) ಪ್ರಕಟವಾಗಲಿದೆ.
 
ಚಂದಾಪುರ ಮತ್ತು ಜಿಗಣಿ ಪುರಸಭೆ ಹಾಗೂ ಹೆಬ್ಬಗೋಡಿ ನಗರಸಭೆಯ ಮತಎಣಿಕೆ ನಡೆಯಲಿದ್ದು, ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಚಿತ್ರಣ ಸಿಗಲಿದೆ. 23 ಸದಸ್ಯ ಬಲದ ಜಿಗಣಿ ಪುರಸಭೆಯಲ್ಲಿ ಕಳೆದ ಬಾರಿ ಬಿಜೆಪಿ 15, ಕಾಂಗ್ರೆಸ್ 5, ಜೆಡಿಎಸ್ 2, ಪಕ್ಷೇತರರು 1 ಸ್ಥಾನ ಗೆದ್ದಿದ್ದರು.

ಬಿಜೆಪಿಯೇ ಆಡಳಿತ ನಡೆಸಿತ್ತು. ಈ ಬಾರಿ 61 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಎಲ್ಲ 23 ಸ್ಥಾನಗಳಿಗೆ ಸ್ಪರ್ಧಿಸಿದ್ದರೆ, ಜೆಡಿಎಸ್ 13 ಸ್ಥಾನಗಳಿಗೆ ಸ್ಪರ್ಧಿಸಿದೆ. ಎಎಪಿ 1 ಮತ್ತು ಪಕ್ಷೇತರ ಅಭ್ಯರ್ಥಿಗಳು ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಜಿಗಣಿ ಪುರಸಭೆ ವ್ಯಾಪ್ತಿಯಲ್ಲಿ 16,496 ಮತದಾರರು. ಈ ಪೈಕಿ ಪುರುಷರು 9282 ಮತ್ತು ಮಹಿಳೆಯರು 7210.

ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ನಗರಸಭೆಯ ಐದು ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆ ಆಗಿದೆ. ಈ ಪೈಕಿ ಮೂವರು ಕಾಂಗ್ರೆಸ್, ಇಬ್ಬರು ಬಿಜೆಪಿಗೆ ಸೇರಿದವರು. ಕಳೆದ ಬಾರಿ ಬಿಜೆಪಿ 18, ಕಾಂಗ್ರೆಸ್ 12, ಜೆಡಿಎಸ್ ಒಂದು ಸ್ಥಾನದಲ್ಲಿ ಜಯಗಳಿಸಿತ್ತು.

ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿತ್ತು. ಈ ಬಾರಿ 26 ಸದಸ್ಯ ಸ್ಥಾನಕ್ಕೆ 58 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದರು. ಕಾಂಗ್ರೆಸ್ 25, ಬಿಜೆಪಿ 21, ಜೆಡಿಎಸ್ 6, ಸಿಪಿಐ 1, ಪಕ್ಷೇತರರು ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 59,206 ಮತದಾರರು ಇದ್ದಾರೆ. ಈ ಪೈಕಿ ಪುರುಷರು 35,475, ಮಹಿಳೆಯರು 23,721.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

ಮುಂದಿನ ಸುದ್ದಿ
Show comments