Webdunia - Bharat's app for daily news and videos

Install App

ಮೋಚಾ ಅಬ್ಬರಕ್ಕೆ ನಲುಗಿದ ಮ್ಯಾನ್ಮಾರ್ ! 6 ಸಾವು, 700ಕ್ಕೂ ಹೆಚ್ಚು ಜನರಿಗೆ ಗಾಯ

Webdunia
ಬುಧವಾರ, 17 ಮೇ 2023 (09:09 IST)
ನೈಪಿಡಾವ್ : ಬಂಗಾಳಕೊಲ್ಲಿಯಲ್ಲಿ ಹುಟ್ಟಿಕೊಂಡಿರುವ ಮೋಚಾ ಚಂಡಮಾರುತ ಭಾರತ, ಬಾಂಗ್ಲಾ ಹಾಗೂ ಮ್ಯಾನ್ಮಾರ್ ದೇಶಗಳಲ್ಲಿ ಭೀತಿ ಹುಟ್ಟಿಸಿದೆ. ಇದು 1982ರ ಬಳಿಕ ಬಂಗಾಳಕೊಲ್ಲಿಯಲ್ಲಿನ 2ನೇ ಅತ್ಯಂತ ತೀವ್ರವಾದ ಚಂಡಮಾರುತ ಎನ್ನಲಾಗಿದೆ.
 
ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್ನಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದೆ. ಚಂಡಮಾರುತದ ಹೊಡೆತಕ್ಕೆ ಮ್ಯಾನ್ಮಾರ್ನ ರಖೈನ್ ರಾಜ್ಯದಲ್ಲಿ ಸಿಟ್ವೆ ಟೌನ್ಶಿಪ್ ಬಳಿ ಭೂಕುಸಿತವಾಗಿದೆ. ಕಟ್ಟಡವೊಂದರ ಛಾವಣಿ ಕುಸಿದು ಕನಿಷ್ಠ 6 ಜನರು ಸಾವನ್ನಪ್ಪಿದ್ದಾರೆ. ರಸ್ತೆಗಳು ನೀರಿನಿಂದ ತುಂಬಿ ಹರಿದು ನದಿಗಳಾಗಿ ಪರಿವರ್ತನೆಗೊಂಡಿವೆ. ಮರ, ಕಂಬಗಳು ಬಿದ್ದು, ಸಂಪರ್ಕವೂ ಕಡಿತಗೊಂಡಿದೆ ಎಂದು ವರದಿಯಾಗಿದೆ.

ಚಂಡಮಾರುತ ಗಂಟೆಗೆ ಸುಮಾರು 209 ಕಿ.ಮೀ ವೇಗದ ಪ್ರಬಲ ಗಾಳಿ ಹೊಂದಿದೆ ಎನ್ನಲಾಗಿದೆ. ಇದರಿಂದ ಹಲವು ನಗರಗಳ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು, ಮೊಬೈಲ್ ಫೋನ್ ಟವರ್ಗಳು, ದೋಣಿಗಳು ಮತ್ತು ದೀಪದ ಕಂಬಗಳಿಗೆ ಹಾನಿಯಾಗಿದೆ. ಬಲವಾದ ಗಾಳಿಯಿಂದಾಗಿ ಸಿಟ್ವೆ ಟೌನ್ಶಿಪ್ನ ಎತ್ತರದ ಪ್ರದೇಶಗಳಲ್ಲಿ ಕಟ್ಟಡಗಳಲ್ಲಿ ಆಶ್ರಯ ಪಡೆದಿದ್ದ ಸುಮಾರು 20,000 ಜನರಲ್ಲಿ 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments