Webdunia - Bharat's app for daily news and videos

Install App

ಮೈಶುಗರ್ ಸಕ್ಕರೆ ಕಾರ್ಖಾನೆ ಪುನರಾರಂಭ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (08:01 IST)
ಮಂಡ್ಯ : ಕನ್ನಂಬಾಡಿ ಕಟ್ಟೆ ಹೇಗೆ ಹಳೆ ಮೈಸೂರು ಭಾಗದ ಜೀವನಾಡಿ, ಹಾಗೆ ಮಂಡ್ಯದ ಜನರಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆ ಜೀವನಾಡಿ.

ಕಳೆದ ನಾಲ್ಕು ವರ್ಷಗಳಿಂದ ಬಂದ್ ಆಗಿದ್ದ ಈ ಕಾರ್ಖಾನೆ ಇದೀಗ ಮತ್ತೆ ಪುನರಾರಂಭಗೊಂಡಿದೆ. ಈ ಮೂಲಕ ಸಕ್ಕರೆ ನಾಡಿನ ಜನರಿಗೆ ರಾಜ್ಯ ಸರ್ಕಾರ ಗೌರಿ-ಗಣೇಶ ಹಬ್ಬದ ಗಿಫ್ಟ್ ನೀಡಿದೆ.

ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಅಂದ್ರೆ ಅದು ಮಂಡ್ಯದ ಮೈಶುಗರ್ ಕಾರ್ಖಾನೆ. ಒಂದು ಕಾಲದಲ್ಲಿ ಗತವೈಭವಕ್ಕೆ ಕಾರಣವಾಗಿದ್ದ ಈ ಕಾರ್ಖಾನೆ ಕೊಡುವ ದರವೇ ಇಡೀ ರಾಜ್ಯದ ಕಬ್ಬಿನ ದರವನ್ನು ನಿರ್ಧಾರ ಮಾಡ್ತಿತ್ತು.

ಅಂತಹ ಇತಿಹಾಸ ಪ್ರಸಿದ್ಧ ಕಾರ್ಖಾನೆ ಅವ್ಯಾಹತ ಭ್ರಷ್ಟಾಚಾರ, ರಾಜಕೀಯ ಹಪಾಹಪಿಗೆ ಸಿಲುಕಿ ನಶಿಸುವ ಹಂತ ತಲುಪಿತ್ತು. ಕಳೆದ ನಾಲ್ಕು ವರ್ಷಗಳಿಂದ ಈ ಕಾರ್ಖಾನೆ ಸಂಪೂರ್ಣ ಸ್ತಬ್ಧವಾಗಿತ್ತು. ಕಾರ್ಖಾನೆ ಸ್ಥಗಿತದಿಂದ ಇಡೀ ಮಂಡ್ಯ ಜಿಲ್ಲೆಯ ಆರ್ಥಿಕ ಸ್ಥಿತಿ ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ರು.

ಈ ಕಾರ್ಖಾನೆ ಆರಂಭಕ್ಕೆ ನಿರಂತರವಾಗಿ, ಸಾಕಷ್ಟು ಹೋರಾಟಗಳು ನಡೆದಿದ್ವು. ಕಾಲಕಳೆದಂತೆ ಮೈಶುಗರ್ ವಿಚಾರವಾಗಿ ನಡೆಯುತ್ತಿದ್ದ ಹೋರಾಟಗಳು ಕೂಡ ಕವಲೊಡೆದು ಗೊಂದಲದ ಗೂಡಾಗಿತ್ತು.

ಕೆಲವರು ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಆರಂಭಕ್ಕೆ ಪಟ್ಟು ಹಿಡಿದ್ರೆ. ಇನ್ನು ಕೆಲವರು ಖಾಸಗಿಯಾದರೂ ಸರಿ, ಓ ಅಂಡ್ ಎಂ ಆದ್ರೂ ಸರಿ. ಹೇಗಾದ್ರೂ ಆಗ್ಲೀ ಮೊದಲು ಕಾರ್ಖಾನೆ ಆರಂಭವಾಗ್ಲೀ ಅಂತಾ ಒತ್ತಾಯಿಸಿದ್ರು. ಇದು ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿತ್ತು. ಈ ಹಿಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಪುನರಾರಂಭಿಸುವಂತೆ ಹೇಳಲಾಗಿತ್ತು. ಅದಕ್ಕೆ ಪೂರಕ ಎಂಬಂತೆ ಪುನಾರಂಭವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಮಹತ್ವದ ಬೆಳವಣಿಗೆ: ಚೀನಾದಿಂದ ಭಾರತಕ್ಕೆ ನೇರ ವಿಮಾನಯಾನ ಸೇವೆ ಆರಂಭ

ಈ ದಿನ ರಾಜ್ಯ ರಾಜಧಾನಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ಬಂದ್‌: ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments