ಕೋವಿಡ್ ವಾರ್ ರೂಮ್​ಗೆ ರಾಷ್ಟ್ರ ಪ್ರಶಸ್ತಿ

Webdunia
ಭಾನುವಾರ, 9 ಜನವರಿ 2022 (06:59 IST)
ಹೈದರಾಬಾದ್ : ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.
ಹೈದರಾಬಾದ್ನಲ್ಲಿ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಈ ವೇಳೆ ಕರ್ನಾಟಕ ರಾಜ್ಯ ಕೋವಿಡ್-19 ವಾರ್ ರೂಮ್ ಗೆ ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು(ಐಸಿಟಿ) ಬಳಸುವ ವಿಭಾಗಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ.

ಈ ಪ್ರಶಸ್ತಿಯನ್ನು ಕೋವಿಡ್ ವಾರ್ ರೂಮ್ ಮುಖ್ಯಸ್ಥ ಮುನಿಶ್ ಮೌದ್ಗಿಲ್ ಸ್ವೀಕರಿಸಿದರು. ನಂತರ ಈ ಕುರಿತು ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್ ಗಳಿಗೆ ನಾವು ಸಪೋರ್ಟ್ ನೆಟ್ ವರ್ಕ್ ಆಗಿದ್ದೇವೆ.

ಸರಿಯಾದ ಸಮಯಕ್ಕೆ ಸೂಕ್ತ ಮಾಹಿತಿಯನ್ನು ನೀಡಿ ಜೀವ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕೋವಿಡ್ ನಿರ್ವಹಣೆಗೆ ಬೆಂಬಲ ವ್ಯವಸ್ಥಿತವಾಗಿದೆ.

ರಾಜ್ಯಕ್ಕೆ ಮಾರ್ಚ್ 2020 ರಲ್ಲಿ ಮೊದಲ ಅಲೆ ಅಪ್ಪಳಿಸಿತ್ತು. ಈ ಅಲೆ ಆರಂಭವಾದ 2-3 ದಿನಗಳಲ್ಲಿ ವಾರ್ಡ್ ರೂಮ್ ಅನ್ನು ಸ್ಥಾಪಿಸಲಾಗಿತ್ತು. ಈ ವೇಳೆ ಕೊರೊನಾ ವಾಚ್ ಮೊಬೈಲ್ ಅಪ್ಲಿಕೇಶನ್ ಅನ್ನು ಮೊದಲು ರಚಿಸಲಾಯಿತು.

ಇಡೀ ಭಾರತದಲ್ಲಿ ಸೋಂಕಿತರ ಸಂಪರ್ಕ ಪತ್ತೆಹಚ್ಚುವಿಕೆಗಾಗಿ ಅಪ್ಲಿಕೇಶನ್ ಅನ್ನು ಬಳಸುತ್ತಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಹೆಮ್ಮೆಯಿಂದ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬುರಗಿಯಲ್ಲೂ ಐಟಿ ಕಂಪನಿ ಇಲ್ಲ ಎಂದ ವಿಜಯೇಂದ್ರಗೆ ನೀವು ಶಿವಮೊಗ್ಗವನ್ನು ಸಿಂಗಾಪುರ ಮಾಡಿದ್ರಾ ಎಂದ ಪ್ರಿಯಾಂಕ್ ಖರ್ಗೆ

ವಂದೇಮಾತರಂನಲ್ಲಿ ದೇವರ ಹೆಸರು ಬರುತ್ತೆ, ದೇಶದಲ್ಲಿ ಎಲ್ಲಾ ಧರ್ಮದವರಿದ್ದಾರೆ ಹಾಗಾಗಿ ಹಾಡಬಾರದು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ನೋಂದಣಿ ಬಿಡಿ, ಮೊದಲು ಕಾಂಗ್ರೆಸ್ ನೋಂದಣಿ ರದ್ಧತಿ ಆಗದಂತೆ ನೋಡಿಕೊಳ್ಳಿ: ವಿಜಯೇಂದ್ರ

ಮುಂದಿನ ಸುದ್ದಿ
Show comments