Webdunia - Bharat's app for daily news and videos

Install App

ವಿಧಾನಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಟಾಕ್ ಫೈಟ್ : ಸದನ ಮುಂದೂಡಿಕೆ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (14:50 IST)
ಬೆಂಗಳೂರು : ಇಂದು ಸದನ ಆರಂಭವಾಗುತ್ತಿದ್ದಂತೆ ಚಾಣಕ್ಯ ವಿವಿ ಮಸೂದೆ ಕುರಿತಂತೆ ಚರ್ಚೆ ಆರಂಭಗೊಂಡಿತ್ತು. ಇಂತಹ ಮಸೂದೆಗೆ ವಿರೋಧ ವ್ಯಕ್ತ ಪಡಿಸಿದಂತ ಕಾಂಗ್ರೆಸ್, ಸದನದಲ್ಲಿ ಗದ್ದಲ ಉಂಟು ಮಾಡಿತು.
Photo Courtesy: Google

ಅಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೂ ವಿರೋಧ ವ್ಯಕ್ತ ಪಡಿಸಿತು. ಇದರಿಂದ ಆಡಳಿತ ಹಾಗೂ ವಿಪಕ್ಷಗಳ ಶಾಸಕರ ನಡುವೆ ಮಾತನಿ ಚಕಮಕಿ ಉಂಟಾದ ಕಾರಣ, ಸದನವನ್ನು ಸ್ಪೀಕರ್ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಿದರು.
ಸದನದಲ್ಲಿ ಇಂದು ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಚಾಣಕ್ಯ ವಿವಿ ಮಸೂದೆಗಳ ಮೇಲೆ ಚರ್ಚೆ ಆರಂಭಗೊಂಡಿತ್ತು. ಈ ವೇಳೆ ಕಾಂಗ್ರೆಸ್ ನಿಂದ ತೀವ್ರ ವಿರೋಧ ವ್ಯಕ್ತವಾಯಿತು. ಬಿಜೆಪಿ ತರೋದಕ್ಕೆ ಹೊರಟಿರುವಂತ ಎನ್ ಇ ಪಿ, ನಾಗ್ಪುರ ಎಜುಕೇಷನ್ ಪಾಲಿಸಿ ಎಂಬುದಾಗಿ ಸದನದಲ್ಲಿ ಡಿಕೆ ಶಿವಕುಮಾರ್ ಕೂಗಿ ಹೇಳಿದರು.
ಇದರಿಂದ ಸಿಟ್ಟಾದಂತ ಬಿಜೆಪಿಯ ಶಾಸಕ ಸಿ.ಟಿ.ರವಿಯವರು, ಇದು ನಾಗ್ಪುರ ಎಜುಕೇಷನ್ ಪಾಲಿಸಿ ಅಲ್ಲ. ರಾಷ್ಟ್ರೀಯ ಶಿಕ್ಷಣ ನೀತಿ ಎಂಬುದಾಗಿ ಟಾಂಗ್ ನೀಡಿದರು. ಈ ಮೂಲಕ ಆಡಳಿತ, ವಿಪಕ್ಷಗಳ ಶಾಸಕರ ನಡುವೆ ಮಾತಿನ ಚಕಮಕಿ ಉಂಟಾಯಿತು.
ಈ ವೇಳೆ ಮಧ್ಯ ಪ್ರವೇಶಿಸಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಪಕ್ಷಗಳು ಆರ್ ಎಸ್ ಎಸ್ ಎಜುಕೇಷನ್ ಪಾಲಿಸಿ ಆದ್ರೂ ಅನ್ನಲೀ, ನಾಗ್ಪುರ ಎಜುಕೇಷನ್ ಪಾಲಿಸಿ ಆದ್ರೂ ಅನ್ನಲಿ. ಆದ್ರೇ ಶೈಕ್ಷಣಿಕ ವ್ಯವಸ್ಥೆ ಬದಲಾವಣೆ ಅವಶ್ಯಕತೆ ಇದೆ. ಇದಕ್ಕಾಗಿ ಯಾರ್ ಏನೇ ಅಂದ್ರೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದೇ ತರುತ್ತೇವೆ ಎಂಬುದಾಗಿ ತಿರುಗೇಟು ನೀಡಿದರು. ಇದರಿಂದಾಗಿ ಸದನದಲ್ಲಿ ಗದ್ದಲ ಕೋಲಾಹಲ ಉಂಟಾದ ಕಾರಣ ಸ್ಪೀಕರ್ ಸದನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಬೈಕ್ ಗಿಂತ ಕಾರಿನ ಎಂಜಿನ್ ಯಾಕೆ ಭಾರ; ರಾಹುಲ್ ಗಾಂಧಿ ತಲೆಗೆ ನೊಬೆಲ್ ಪ್ರೈಸ್ ಕೊಡ್ಬೇಕು ಎಂದ ಪಬ್ಲಿಕ್

ಹಮಾಸ್‌ಗೆ ಗಡುವು ನೀಡಿದ ಟ್ರಂಪ್‌: ಒಪ್ಪಂದ ತಿರಸ್ಕರಿಸಿದರೆ ನರಕದರ್ಶನ ಎಂದು ದೊಡ್ಡಣ್ಣ ವಾರ್ನಿಂಗ್‌

ಬಿಜೆಪಿಯವರಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸು ನಿದ್ದೆಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಗೋಡಂಬಿ ಅತಿಯಾಗಿ ತಿನ್ನುತ್ತೀರಾ ಹಾಗಿದ್ದರೆ ಇದನ್ನು ಓದಿ

ಮುಂದಿನ ಸುದ್ದಿ
Show comments