Webdunia - Bharat's app for daily news and videos

Install App

ಕೊರೋನಾ ಮಧ್ಯೆ ಹೊಸ ರೋಗ, ನಾಲಗೆ ಬಣ್ಣ ಹಳದಿ!

Webdunia
ಭಾನುವಾರ, 25 ಜುಲೈ 2021 (17:20 IST)
ಟೊರೊಂಟೊ(ಜು.25): ಕೊರೋನಾ ಸೋಂಕಿನ ಮಧ್ಯೆ ಟೊರೊಂಟೊದಲ್ಲಿ 12 ವರ್ಷದ ಮಗು ಗಂಭೀರ ಮತ್ತು ಅಪರೂಪದ ಕಾಯಿಲೆಯಿಂದ ಬಳಲುತ್ತಿದೆ. ಹುಡುಗನ ನಾಲಿಗೆ ಸಂಪೂರ್ಣವಾಗಿ ಹಳದಿ ಬಣ್ಣಕ್ಕೆ ತಿರುಗಿದೆ. ಈ ರೋಗ ಅವನ ರೋಗನಿರೋಧಕ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಅವನ ಕೆಂಪು ರಕ್ತ ಕಣಗಳು ನಾಶವಾಗಿವೆ.

* ಟೊರೊಂಟೊದಲ್ಲಿ 12 ವರ್ಷದ ಮಗುವಿಗೆ ವಿಚಿತ್ರ ರೋಗ
* ನಾಲಗೆ ಬಣ್ಣ ಸಂಪೂರ್ಣ ಹಳದಿ
* ಟೊರೊಂಟೊದಲ್ಲಿ 12 ವರ್ಷದ ಮಗು

ಗಂಟಲು ನೋವು, ಮೂತ್ರದ ಬಣ್ಣವೂ ಬದಲು

ದಿ ನ್ಯೂ ಇಂಗ್ಲೆಂಡ್ ಜರ್ನಲ್ ಆಫ್ ಮೆಡಿಸಿನ್ನಲ್ಲಿ ಪ್ರಕಟವಾದ ವರದಿಯ ಅನ್ವಯ, ಬಾಲಕನಿಗೆ ಗಂಟಲು ನೋವು ಕಾಣಿಸಿಕೊಂಡಿದ್ದು, ಮೂತ್ರದ ಬಣ್ಣವೂ ಬದಲಾಗಿದೆ.  ಚರ್ಮವೂ ಮಸುಕಾಗಲಾರಂಭಿಸಿದೆ. ಹೀಗಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು
ಆರಂಭದಲ್ಲಿ, ಇದು ಕಾಮಾಲೆ ರೋಗವೆಂದು ವೈದ್ಯರು ಭಾವಿಸಿದ್ದರು, ಕಾಮಾಲೆಯಲ್ಲೂ ಚರ್ಮದ ಬಣ್ಣ ಹಳದಿಯಾಗುತ್ತದೆ. ಕಣ್ಣುಗಳ ಬಿಳಿ ಭಾಗವೂ ಹಳದಿ ಬಣ್ಣಕ್ಕೆ ತಿರುಗುತ್ತದೆ. ಆದರೆ ನಾಲಿಗೆಯ ಹಳದಿ ಬಣ್ಣದಿಂದಾಗಿ ವೈದ್ಯರು ಕೂಡ ಆಶ್ಚರ್ಯಚಕಿತರಾದರು.

ಕೋಲ್ಡ್ ಅಗ್ಲುಟಿನಿನ್ ರೋಗ ಪತ್ತೆ
ಕೆಲವು ಪರೀಕ್ಷೆಗಳ ಬಳಿಕ ಬಾಲಕನಿಗೆ ರಕ್ತಹೀನತೆ ಇದೆ ಮತ್ತು ಎಪ್ಸ್ಟೀನ್ ಬಾರ್ ವೈರಸ್ ಇದೆ ಎಂದು ವೈದ್ಯರಿಗೆ ತಿಳಿದು ಬಂದಿದೆ. ಇದು ಸಾಮಾನ್ಯ ವೈರಸ್ ಆಗಿದ್ದು,  ಸಾಮಾನ್ಯವಾಗಿ ಬಾಲ್ಯದಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತದೆ. ಹುಡುಗನಿಗೆ ಕೋಲ್ಡ್ ಅಗ್ಲುಟಿನಿನ್ ಕಾಯಿಲೆ ಇರುವುದು ಪತ್ತೆಯಾಗಿದೆ. ಇದು ಅಪರೂಪದ ಸ್ವಯಂ ನಿರೋಧಕ ಕಾಯಿಲೆಯಾಗಿದ್ದು ಅದು ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ.
ಈ ರೋಗದಲ್ಲಿ ಕೆಂಪು ರಕ್ತ ಕಣಗಳು ನಾಶವಾಗಲು ಪ್ರಾರಂಭವಾಗುತ್ತದೆ. ಶೀತದಿಂದಾಗಿ ಈ ಸ್ಥಿತಿ ಉದ್ಭವಿಸುತ್ತದೆ. ಎಪ್ಸ್ಟೀನ್ ಬಾರ್ ವೈರಸ್ ಸೋಂಕಿನಿಂದ ಹುಡುಗನಿಗೆ ಈ ಕಾಯಿಲೆ ಬಂದಿದೆ ಎಂದು ವೈದ್ಯರು ಶಂಕಿಸಿದ್ದಾರೆ.
ಯುಎಸ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಪ್ರಕಾರ, ಕೋಲ್ಡ್ ಅಗ್ಲುಟಿನಿನ್ ಕಾಯಿಲೆಯು ರಕ್ತಹೀನತೆ ಮತ್ತು ಕೆಂಪು ರಕ್ತ ಕಣಗಳು ಕುಗ್ಗಲು ಕಾರಣವಾಗುತ್ತದೆ. ಆಸ್ಪತ್ರೆಯಲ್ಲಿ ರೋಗಿಗೆ ಏಳು ವಾರಗಳ ಕಾಲ ಔಷಧಿ ಕೊಟ್ಟು ಬಳಿಕ ಹುಡುಗನನ್ನು ಡಿಸ್ಚಾರ್ಜ್ ಮಾಡಲಾಯಿತು. ಅವನು ಈಗ ಚೆನ್ನಾಗಿದ್ದಾನೆ. ನಾಲಿಗೆಯ ಬಣ್ಣವೂ ಕ್ರಮೇಣ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ ಎಂದು  ವೈದ್ಯರು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments