ಹೊಸ ಮಾರ್ಗಸೂಚಿ ಪ್ರಕಟ?

Webdunia
ಬುಧವಾರ, 8 ಡಿಸೆಂಬರ್ 2021 (10:43 IST)
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ತಳಿ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಕೆಲವೊಂದು ಕ್ರಮಗಳನ್ನು ಕೈಗೊಂಡಿದೆ.
ಈ ನಡುವೆ ಕೋವಿಡ್ 19 ಮೂರನೇ ಅಲೆಯ ಭೀತಿಯೂ ಇರುವ ಹಿನ್ನೆಲೆಯಲ್ಲಿ ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಸಲಿದ್ದಾರೆ.
ಸಭೆಯ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆಗೊಳ್ಳುವ ಸಾಧ್ಯತೆಯೂ
ಬುಧವಾರ ನಡೆಯಲಿರುವ ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿನ ಎರಡು ಪ್ರಕರಣಗಳು ಅಧಿಕೃತವಾಗಿ ಪತ್ತೆಯಾಗಿವೆ. ಈಗಾಗಲೇ ಓಮಿಕ್ರಾನ್ ಸೋಂಕು ಕಾಣಿಸಿಕೊಂಡ ವೈದ್ಯರಲ್ಲಿ ಮತ್ತೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಮತ್ತೊಂದು ಕಡೆಯಲ್ಲಿ ಶಾಲಾ- ಕಾಲೇಜುಗಳಲ್ಲೂ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಹಜವಾಗಿ ಇದು ಆತಂಕಕ್ಕೆ ಕಾರಣವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments