Webdunia - Bharat's app for daily news and videos

Install App

ಕರ್ನಾಟಕದಲ್ಲಿ ಹೊಸ ತಳಿಯ ಕೊವಿಡ್ ಪ್ರಕರಣ ಪತ್ತೆ!

Webdunia
ಗುರುವಾರ, 28 ಅಕ್ಟೋಬರ್ 2021 (08:00 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹೊಸ ತಳಿಯ 2 ಕೊವಿಡ್ ಪ್ರಕರಣ ಪತ್ತೆ ಆಗಿದೆ. ಇಬ್ಬರಲ್ಲಿ AY 4.2  ತಳಿಯ ಕೊರೊನಾ ಸೋಂಕು ದೃಢವಾಗಿದೆ.
ಹೊಸ ತಳಿ ಬಗ್ಗೆ ಎಚ್ಚರವಹಿಸುವಂತೆ ಕೇಂದ್ರ ಈಗಾಗಲೇ ನಿರ್ದೇಶನ ನೀಡಿದೆ. ವಿದೇಶಗಳಲ್ಲಿ ಕಂಡು ಬರುತ್ತಿರುವ ಕೊರೊನಾ ವೈರಾಣುವಿನ ಡೆಲ್ಟಾ ಎವೈ 4.2 ರೂಪಾಂತರಿ ಕರ್ನಾಟಕದಲ್ಲಿ ಪತ್ತೆಯಾಗಿತ್ತು. ಈ ಮೊದಲು, ಬೆಂಗಳೂರಿನ ಮೂವರು ಮತ್ತು ರಾಜ್ಯದ ಇತರೆಡೆಯ ನಾಲ್ವರಲ್ಲಿ ಈ ರೂಪಾಂತರಿ ಪತ್ತೆಯಾಗಿರುವುದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಣದೀಪ್ ದೃಢಪಡಿಸಿದ್ದರು. ಹೊಸ ರೂಪಾಂತರಿಯಿಂದ ರಾಜ್ಯದಲ್ಲಿ ಈವರೆಗೆ ಯಾರೊಬ್ಬರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದರು.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ನಿಯಂತ್ರಣದಲ್ಲಿವೆ. ವಿದೇಶಗಳಿಂದ ಬರುವ ಪ್ರವಾಸಿಗರು ಕನಿಷ್ಠ 72 ಗಂಟೆ ಮೊದಲು ಮಾಡಿಸಿಕೊಂಡಿರುವ ಆರ್ಟಿ-ಪಿಸಿಆರ್ ಪರೀಕ್ಷೆಯ ವರದಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ವರದಿಗಳನ್ನು ಏರ್ ಸುವಿಧಾ ಪೋರ್ಟಲ್ನಲ್ಲಿ ಈ ವರದಿಗಳನ್ನು ಅಪ್ಲೋಡ್ ಮಾಡಬೇಕು. ಇಷ್ಟು ಬಿಟ್ಟರೆ ರಾಜ್ಯದಲ್ಲಿ ಕ್ವಾರಂಟೈನ್ನಂಥ ಕ್ರಮಗಳನ್ನು ಜಾರಿಗೊಳಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments