Webdunia - Bharat's app for daily news and videos

Install App

ಬಜೆಟ್ ನಲ್ಲಿ ಬೂಸ್ಟರ್‌ ಡೋಸ್‌ ಬಗ್ಗೆ ಏನಿದೆ !

Webdunia
ಭಾನುವಾರ, 6 ಫೆಬ್ರವರಿ 2022 (10:13 IST)
ನವದೆಹಲಿ : 2022-23ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಕೋವಿಡ್‌-19 ಲಸಿಕೆಗಾಗಿ ಕೇವಲ 5000 ಕೋಟಿ ರು. ಮೀಸಲಿಟ್ಟಿದೆ.
 
ಈ ಮೂಲಕ ದೇಶದ ಜನರು ಬೂಸ್ಟರ್‌ ಡೋಸ್‌ ಲಸಿಕೆಯನ್ನು ತಾವೇ ಹಣ ಕೊಟ್ಟು ಪಡೆದುಕೊಳ್ಳಬೇಕು ಎಂಬ ಸುಳಿವು ನೀಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

2021-22ನೇ ಸಾಲಿನ ಬಜೆಟ್‌ನಲ್ಲಿ ಲಸಿಕಾಕರಣಕ್ಕಾಗಿ 35,000 ಕೋಟಿ ಹಣ ಮೀಸಲಿಡಲಾಗಿತ್ತು. ಈ ವರ್ಷ ಅದನ್ನು .5000 ಕೋಟಿಗೆ ತಗ್ಗಿಸಲಾಗಿದೆ. ಈ ಮೂಲಕ ಕೇಂದ್ರವು ಎರಡು ಡೋಸ್‌ ಲಸಿಕಾಕರಣ ಪೂರ್ಣಗೊಳಿಸುವ ಉದ್ದೇಶ ಮಾತ್ರ ಹೊಂದಿದೆ ಎನ್ನಲಾಗಿದೆ.

ಈ ಹಿಂದೆ ಮೀಸಲಿಟ್ಟಹಣದಲ್ಲಿ 167 ಕೋಟಿ ಡೋಸ್‌ ಲಸಿಕೆ ವಿತರಣೆ ಮಾಡುವ ಮೂಲಕ ಈಗಾಗಲೇ 20,000 ಕೋಟಿ ರು. ಹಣ ವ್ಯಯ ಮಾಡಲಾಗಿದೆ. ಶೇ.95ರಷ್ಟುವಯಸ್ಕರಿಗೆ ಕನಿಷ್ಠ 1 ಡೋಸ್‌, ಶೇ.75ರಷ್ಟುಜನರಿಗೆ ಎರಡೂ ಡೋಸ್‌ ವಿತರಣೆ ಮಾಡಲಾಗಿದೆ ಎಂದು ಕಳೆದ ಸಂಸತ್‌ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ತಿಳಿಸಿತ್ತು.

ಈಗ ಬೂಸ್ಟರ್‌ ಡೋಸ್‌ ಆರಂಭಿಸಲಾಗಿದ್ದರೂ ಅದು ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಪೂರ್ವರೋಗ ಪೀಡಿತರಿಗೆ ಮಾತ್ರ ಸೀಮಿತವಾಗಿದೆ.

ಮುಂದೆ 15 ಅಥವಾ 18 ವರ್ಷ ಮೇಲ್ಪಟ್ಟಎಲ್ಲರಿಗೂ ಬೂಸ್ಟರ್‌ ಡೋಸ್‌ಗೆ ಅವಕಾಶ ನೀಡಿದರೆ, ಅದು ಉಚಿತವಾಗಿ ಇರುವುದಿಲ್ಲ ಎಂದು ವಿಶ್ಲೇಷಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments