ತಿಮ್ಮಪ್ಪನ ದರ್ಶನಕ್ಕೆ ನೋ ಎಂಟ್ರಿ!

Webdunia
ಗುರುವಾರ, 2 ಡಿಸೆಂಬರ್ 2021 (16:43 IST)
ತಿರುಪತಿ : ತಮಿಳುನಾಡು, ಆಂಧ್ರದ ರಾಯಲಸೀಮೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಮತ್ತೊಮ್ಮೆ ತಿರುಮಲ ಘಾಟ್ನಲ್ಲಿ ಬೃಹತ್ ಬಂಡೆ ಉರುಳಿದೆ.
ಅತೀವೃಷ್ಠಿಯ ಪರಿಣಾಮ ತಿರುಪತಿಯಿಂದ ತಿರುಮಲಕ್ಕೆ ತೆರಳುವ ಘಾಟ್ ರಸ್ತೆ ಮೇಲೆ ಬೃಹತ್ ಬಂಡೆ ಕಲ್ಲುಗಳು ಉರುಳಿ ಬಿದ್ದಿದೆ. ಇದರಿಂದಾಗಿ ರಸ್ತೆ ಸಂಪೂರ್ಣವಾಗಿ ಹಾನಿಯಾಗಿದ್ದು, ತಾತ್ಕಾಲಿಕವಾಗಿ ತಿರುಪತಿ ತಿಮ್ಮಪ್ಪನ ದರ್ಶನ ರದ್ದು ಮಾಡಲಾಗಿದೆ. 
ತಿರುಮಲಕ್ಕೆ ತೆರಳುವ 2ನೇ ಘಾಟ್ದ ರಸ್ತೆಯಲ್ಲಿ ಎಂದರೆ ತಿಮ್ಮಪ್ಪನ ದೇಗುಲದಿಂದ ಸುಮಾರು 16 ಕಿ.ಮೀ ದೂರದಲ್ಲಿ ಭೂಕುಸಿತ ಉಂಟಾಗಿದೆ. ಒಂದು ತಿಂಗಳ ಅವಧಿಯಲ್ಲಿ ತಿರುಮಲ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು ಇದು ಎರಡನೇ ಬಾರಿ. ಈ ಭೂಕುಸಿತಕ್ಕೆ ಭಾರೀ ಮಳೆಯೇ ಕಾರಣವಾಗಿದ್ದು, ನವೆಂಬರ್ 11ರಂದು ಘಾಟ್ ರಸ್ತೆಗಳನ್ನು ಮುಚ್ಚಲಾಗಿತ್ತು. ನವೆಂಬರ್ 20ರಂದು ಮತ್ತೆ ಘಾಟ್ ರಸ್ತೆಯನ್ನು ತೆರೆಯಲಾಗಿತ್ತು. ಆದರೆ ಇದೀಗ ಮತ್ತೆ ಭೂಕುಸಿತವಾಗಿದೆ.
ನವೆಂಬರ್ನಲ್ಲಿ ದೇಶಾದ್ಯಂತ  645 ಬಾರಿ ಹೆಚ್ಚು ಮಳೆ, 168 ಬಾರಿ ಅತೀ ಹೆಚ್ಚು ಮಳೆ ಆಗಿದೆ. 11 ಬಾರಿ 204 ಸೆಂಟಿಮೀಟರ್ಗಿಂತ ಹೆಚ್ಚು ಮಳೆ ಬಿದ್ದಿದೆ. ಇದು ಕಳೆದ ವರ್ಷದ ಮಳೆ ಸಮವಾಗಿದೆ. ಐದು ವರ್ಷಗಳಲ್ಲಿಯೇ ನವೆಂಬರ್ನಲ್ಲಿ ಅತೀ ಮಳೆ ಆಗಿದೆ ಎಂದು ಐಎಂಡಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಶ್ರೀಮಂತ ನಾಗರಿಕ ಪರಂಪರೆ ಬಗ್ಗೆ ರಾಜನಾಥ ಸಿಂಗ್ ಶ್ಲಾಘನೆ

ಬಳ್ಳಾರಿ ಗಲಭೆ ಪ್ರಕರಣ, ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ

ಬಳ್ಳಾರಿ ಶೂಟೌಟ್‌, ಮುಂದಿನ ದಿನಗಳಲ್ಲಿ ಇದಕ್ಕಿಂದ ವಿಜೃಂಭಣೆಯಿಂದ ಪುತ್ಥಳಿ ಅನಾವರಣ

ಅಕ್ರಮ ಹಣ ವರ್ಗಾವಣೆ, ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅರೆಸ್ಟ್‌

ಬಳ್ಳಾರಿ ಶೂಟೌಟ್ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಮಧುಬಂಗಾರಪ್ಪ

ಮುಂದಿನ ಸುದ್ದಿ
Show comments