ಆಧಾರ್ ಕಾರ್ಡ್ನಲ್ಲಿ ಹಿಜಬ್ ಧರಿಸಿಲ್ಲ

Webdunia
ಗುರುವಾರ, 24 ಫೆಬ್ರವರಿ 2022 (07:34 IST)
ಬೆಂಗಳೂರು :  ಹಿಜಬ್ ವಿವಾದಕ್ಕೆ ಸಿಎಫ್ಐ ಸಂಘಟನೆಯೇ ಕಾರಣ ಅಂತ ಕಾಲೇಜ್ ಶಿಕ್ಷಕರ ಪರ ವಾದ ಮಾಡುತ್ತಿರುವ ವಕೀಲ ನಾಗಾನಂದ್ ವಾದಿಸಿದ್ದಾರೆ.

ಹೈಕೋರ್ಟ್ನಲ್ಲಿ 9ನೇ ದಿನದ ಹಿಜಬ್ ವಿವಾದ ವಿಚಾರಣೆ ನಡೆಯಿತು. ಸಾರ್ವಜನಿಕ ಸ್ಥಳದಲ್ಲಿ ನಾವು ಹಿಜಜ್ ತೆಗೆಯೋದಿಲ್ಲ ಅನ್ನೋ ವಿದ್ಯಾರ್ಥಿನಿಯರ ಹೇಳಿಕೆಯೇ ಸುಳ್ಳು. ಆಧಾರ್ ಕಾರ್ಡ್ನಲ್ಲಿ ಅವರು ಹಿಜಬ್ ಹಾಕಿಲ್ಲ ಅಂತ ವಕೀಲರು ತೋರಿಸಿದರು. 2014ರಿಂದ ಸಮವಸ್ತ್ರ ಹಾಕಿಕೊಂಡು ಬರುತ್ತಿದ್ದಾರೆ.

2021ರ ಡಿ.30 ರಂದು ಸಿಎಫ್ಐನವರು ಹಿಜಬ್ಗೆ ಅವಕಾಶ ಕೊಡಿ ಅಂತ ಆಡಳಿತ ಮಂಡಳಿಗೆ ಕೇಳಿಕೊಂಡರು. ಇದನ್ನು ಆಡಳಿತ ಮಂಡಳಿ ತಿರಸ್ಕರಿಸಿತು. ಅಂದಿನಿಂದ ವಿದ್ಯಾರ್ಥಿನಿಯರು ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ. ಸಿಎಫ್ಐ ವಿದ್ಯಾರ್ಥಿ ಸಂಘಟನೆ ಆದರೂ ಅಧಿಕೃತ ಮಾನ್ಯತೆ ಪಡೆದಿಲ್ಲ. ಬರೀ ಗದ್ದಲವನ್ನೇ ಸೃಷ್ಟಿಸ್ತಿದೆ ಎಂದು ನಾಗಾನಂದ್ ವಾದಿಸಿದರು. 

ಇದ್ದಕ್ಕಿದ್ದಂತೇ ಇದು ಹೇಗೆ ಸೃಷ್ಟಿಯಾಯಿತು ಅಂತ ಅಚ್ಚರಿ ಸೂಚಿಸಿದ ಸಿಜೆ ಅವಸ್ತಿ, ಸಿಎಫ್ಐ ಬಗ್ಗೆ ಮಾಹಿತಿ ಕೊಡುವಂತೆ ಎಜಿಗೆ ಸೂಚಿಸಿದರು. ಮುಚ್ಚಿದ ಲಕೋಟೆಯಲ್ಲಿ ಮಾಹಿತಿ ಕೊಡೋದಾಗಿ ಎಜಿ ನಾವದಗಿ ತಿಳಿಸಿದರು. ಇದಕ್ಕೆ ಅರ್ಜಿದಾರರ ವಕೀಲ ತಾಹೀರ್ ಮಧ್ಯಪ್ರವೇಶಿಸಿ, ಘಟನೆಗೆ ಕೇಸರಿ ಶಾಲು ಹಂಚಿದ ವರದಿಗಳೂ ಇವೆ. ಅದರ ಬಗ್ಗೆಯೂ ಕೇಳಬೇಕು ಅಂದ್ರು. ಪರಿಶೀಲಿಸುವುದಾಗಿ ಸಿಜೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments