Webdunia - Bharat's app for daily news and videos

Install App

ಆಧಾರ್ ಕಾರ್ಡ್ನಲ್ಲಿ ಹಿಜಬ್ ಧರಿಸಿಲ್ಲ

Webdunia
ಗುರುವಾರ, 24 ಫೆಬ್ರವರಿ 2022 (07:34 IST)
ಬೆಂಗಳೂರು :  ಹಿಜಬ್ ವಿವಾದಕ್ಕೆ ಸಿಎಫ್ಐ ಸಂಘಟನೆಯೇ ಕಾರಣ ಅಂತ ಕಾಲೇಜ್ ಶಿಕ್ಷಕರ ಪರ ವಾದ ಮಾಡುತ್ತಿರುವ ವಕೀಲ ನಾಗಾನಂದ್ ವಾದಿಸಿದ್ದಾರೆ.

ಹೈಕೋರ್ಟ್ನಲ್ಲಿ 9ನೇ ದಿನದ ಹಿಜಬ್ ವಿವಾದ ವಿಚಾರಣೆ ನಡೆಯಿತು. ಸಾರ್ವಜನಿಕ ಸ್ಥಳದಲ್ಲಿ ನಾವು ಹಿಜಜ್ ತೆಗೆಯೋದಿಲ್ಲ ಅನ್ನೋ ವಿದ್ಯಾರ್ಥಿನಿಯರ ಹೇಳಿಕೆಯೇ ಸುಳ್ಳು. ಆಧಾರ್ ಕಾರ್ಡ್ನಲ್ಲಿ ಅವರು ಹಿಜಬ್ ಹಾಕಿಲ್ಲ ಅಂತ ವಕೀಲರು ತೋರಿಸಿದರು. 2014ರಿಂದ ಸಮವಸ್ತ್ರ ಹಾಕಿಕೊಂಡು ಬರುತ್ತಿದ್ದಾರೆ.

2021ರ ಡಿ.30 ರಂದು ಸಿಎಫ್ಐನವರು ಹಿಜಬ್ಗೆ ಅವಕಾಶ ಕೊಡಿ ಅಂತ ಆಡಳಿತ ಮಂಡಳಿಗೆ ಕೇಳಿಕೊಂಡರು. ಇದನ್ನು ಆಡಳಿತ ಮಂಡಳಿ ತಿರಸ್ಕರಿಸಿತು. ಅಂದಿನಿಂದ ವಿದ್ಯಾರ್ಥಿನಿಯರು ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ. ಸಿಎಫ್ಐ ವಿದ್ಯಾರ್ಥಿ ಸಂಘಟನೆ ಆದರೂ ಅಧಿಕೃತ ಮಾನ್ಯತೆ ಪಡೆದಿಲ್ಲ. ಬರೀ ಗದ್ದಲವನ್ನೇ ಸೃಷ್ಟಿಸ್ತಿದೆ ಎಂದು ನಾಗಾನಂದ್ ವಾದಿಸಿದರು. 

ಇದ್ದಕ್ಕಿದ್ದಂತೇ ಇದು ಹೇಗೆ ಸೃಷ್ಟಿಯಾಯಿತು ಅಂತ ಅಚ್ಚರಿ ಸೂಚಿಸಿದ ಸಿಜೆ ಅವಸ್ತಿ, ಸಿಎಫ್ಐ ಬಗ್ಗೆ ಮಾಹಿತಿ ಕೊಡುವಂತೆ ಎಜಿಗೆ ಸೂಚಿಸಿದರು. ಮುಚ್ಚಿದ ಲಕೋಟೆಯಲ್ಲಿ ಮಾಹಿತಿ ಕೊಡೋದಾಗಿ ಎಜಿ ನಾವದಗಿ ತಿಳಿಸಿದರು. ಇದಕ್ಕೆ ಅರ್ಜಿದಾರರ ವಕೀಲ ತಾಹೀರ್ ಮಧ್ಯಪ್ರವೇಶಿಸಿ, ಘಟನೆಗೆ ಕೇಸರಿ ಶಾಲು ಹಂಚಿದ ವರದಿಗಳೂ ಇವೆ. ಅದರ ಬಗ್ಗೆಯೂ ಕೇಳಬೇಕು ಅಂದ್ರು. ಪರಿಶೀಲಿಸುವುದಾಗಿ ಸಿಜೆ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments