Select Your Language

Notifications

webdunia
webdunia
webdunia
webdunia

ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಆಗಿಲ್ಲ: ನಾಗೇಶ್

ಪರೀಕ್ಷೆ
ಬೆಂಗಳೂರು : ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಅಂತ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ಆಗಿದೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಅತ್ಯಂತ ಪಾರದರ್ಶಕವಾಗಿ, ಬಿಗಿ ಭದ್ರತೆ ನಡುವೆ ಪರೀಕ್ಷೆ ನಡೆದಿದೆ. ಆದರೆ ಉತ್ತರಪತ್ರಿಕೆಯಲ್ಲಿ ಪರೀಕ್ಷಾ ನಿಯಮಗಳನ್ನು ಮೀರಿರುವ 63 ಅಭ್ಯರ್ಥಿಗಳ ಫಲಿತಾಂಶವನ್ನು ಶಿಕ್ಷಣ ಇಲಾಖೆಯೇ ತಡೆ ಹಿಡಿದು, ನೊಟೀಸ್ ನೀಡಿದೆ. ಇದನ್ನು ಅಕ್ರಮ ಎನ್ನಲಾಗದು ಎಂದು ಸಚಿವರು ಪ್ರಕಟಣೆ ಹೊರಡಿಸಿದ್ದಾರೆ. 

ಪರೀಕ್ಷೆಯಲ್ಲಿ ತಪ್ಪು ಮಾಡಿರುವ ಅಭ್ಯರ್ಥಿಗಳ ಮಾಹಿತಿಯನ್ನ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಇಲಾಖಾ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ವಿವರ ಮತ್ತು ಅವರು ಮಾಡಿರೋ ತಪ್ಪುಗಳ ಬಗ್ಗೆ ವಿವರವಾದ ಮಾಹಿತಿ ನೀಡಲಾಗಿದೆ.

63 ಅಭ್ಯರ್ಥಿಗಳ ಪೈಕಿ ಇಬ್ಬರನ್ನು ಅನರ್ಹ ಮಾಡಲಾಗಿದೆ. ಈಗಾಗಲೇ ಅಭ್ಯರ್ಥಿಗಳಿಗೆ ನೊಟೀಸ್ ಜಾರಿ ಮಾಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಶಿಕ್ಷಣ ಇಲಾಖೆ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕನಸು ಕಾಣ್ತಾ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ!?