Webdunia - Bharat's app for daily news and videos

Install App

ಆತಂಕ ಬೇಡ, ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ : ಸುಧಾಕರ್

Webdunia
ಗುರುವಾರ, 4 ಆಗಸ್ಟ್ 2022 (11:15 IST)
ಬೆಂಗಳೂರು : ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ.

ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ ವಿಶೇಷ ಸಭೆಯ ಬಳಿಕ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ಜುಲೈ 22 ರಂದು ಮಂಕಿಪಾಕ್ಸ್ ಅನ್ನು ‘ತುರ್ತು ಆರೋಗ್ಯ ಪರಿಸ್ಥಿತಿ’ ಎಂದು ಘೋಷಿಸಿದೆ.

ಸುಮಾರು 80 ದೇಶಗಳ 20,000 ಜನರಿಗೆ ಈ ಸೋಂಕು ಹರಡಿದೆ. ಭಾರತದಲ್ಲಿ 8 ಪ್ರಕರಣಗಳು ಕಂಡುಬಂದಿವೆ. ಕೇರಳದಲ್ಲಿ 5 ಮತ್ತು ದೆಹಲಿಯಲ್ಲಿ ಮೂವರು ಸೋಂಕಿತರಿದ್ದಾರೆ. ಕರ್ನಾಟಕದಲ್ಲಿ 3 ವ್ಯಕ್ತಿಗಳ ಮೇಲೆ ಸಂಶಯದ ಆಧಾರದಲ್ಲಿ ಪರೀಕ್ಷೆ ನಡೆಸಿದ್ದೇವೆ.
ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸೋಂಕಿತರಿಗಾಗಿ ಬೆಂಗಳೂರಿನ ಸಾಂಕ್ರಾಮಿಕ ರೋಗಗಳ (ಇಡಿ) ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಯಾವುದೇ ವ್ಯಕ್ತಿಗೆ ಸೋಂಕು ದೃಢಪಟ್ಟರೆ ಅವರನ್ನು 21 ದಿನಗಳ ಕಾಲ ಐಸೋಲೇಟ್ ಮಾಡಬೇಕು. 21 ದಿನ ಆಸ್ಪತ್ರೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಚರ್ಮದ ಮೇಲೆ ಆಗಿರುವ ಗಾಯ ಗುಣ ಆಗುವವರೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments