ಅನಗತ್ಯ ಕಠಿಣ ನಿರ್ಬಂಧ ಇಲ್ಲ : ಸಿಎಂ

Webdunia
ಗುರುವಾರ, 28 ಏಪ್ರಿಲ್ 2022 (09:35 IST)
ಬೆಂಗಳೂರು : ರಾಜ್ಯದಲ್ಲಿ ಸಂಭಾವ್ಯ 4ನೇ ಅಲೆ ಲಕ್ಷಣಗಳು ಕಾಣುತ್ತಿದ್ದರೂ ಸೋಂಕು ನಿಯಂತ್ರಣಕ್ಕೆ ಯಾವುದೇ ಕಠಿಣ ನಿರ್ಬಂಧಗಳನ್ನು ವಿಧಿಸದಿರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
 
ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸದೆ, ಲಸಿಕೆ  ಹಾಗೂ ಪರೀಕ್ಷೆ ಹೆಚ್ಚಳಕ್ಕೆ ಆದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಿಸಬೇಕು ಎಂದು ತೀರ್ಮಾನಿಸಿದೆ.

ಬುಧವಾರ ರಾಜ್ಯದ ಕೊರೋನಾ  ಸ್ಥಿತಿಗತಿಗಳ ಕುರಿತು ವಿಡಿಯೋ ಸಂವಾದದ ಮೂಲಕ ಮಾಹಿತಿ ಪಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ 6ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ, 15ರಿಂದ 18 ವರ್ಷದ ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ವೇಗ, 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಹೆಚ್ಚು ಒತ್ತು ನೀಡಲು ನಿರ್ಧರಿಸಿದೆ.

ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ಬಳಿಕ ಗೃಹ ಕಚೇರಿ ಕೃಷ್ಣಾ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅನಾವಶ್ಯಕವಾಗಿ ಯಾವುದೇ ನಿರ್ಬಂಧ ಹೇರಬಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಅದರಂತೆ ರಾಜ್ಯದಲ್ಲಿ ಕೊರೋನಾ 4ನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದೇ ಹೊರತು ಯಾವುದೇ ಅನಗತ್ಯ ಹಾಗೂ ಕಠಿಣ ನಿರ್ಬಂಧ ವಿಧಿಸುವುದಿಲ್ಲ. ಆರ್ಥಿಕ ಚಟುವಟಿಕೆಗೆ ನಿರ್ಬಂಧ ವಿಧಿಸದೆ 4ನೇ ಅಲೆ ನಿಯಂತ್ರಿಸಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ಮುಂದಿನ ಸುದ್ದಿ
Show comments