ಶಾಲೆಗಳಿಗೆ ರಜೆ ಕೊಡಲ್ಲ!: ನಾಗೇಶ್

Webdunia
ಸೋಮವಾರ, 29 ನವೆಂಬರ್ 2021 (15:27 IST)
ತುಮಕೂರು : ರಾಜ್ಯದಲ್ಲಿ ಕೆಲವು ಕಡೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸ್ಫೋಟಗೊಂಡ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಪಾಲಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರ ಮಕ್ಕಳ ಶಿಕ್ಷಣಕ್ಕೆ ನೀಡಿರುವ ಆದ್ಯತೆಯನ್ನು ಅವರ ಆರೋಗ್ಯದ ಬಗ್ಗೆಯೂ ನೀಡುತ್ತಿದ್ಧೇವೆ. ಹೀಗಾಗಿ, ಪಾಲಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸಚಿವ ಬಿ. ಸಿ. ನಾಗೇಶ್ ಮನವಿ ಮಾಡಿಕೊಂಡಿದ್ದಾರೆ.
ತುಮಕೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ. ಸಿ. ನಾಗೇಶ್, ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿವೆ. ಮುಖ್ಯವಾಗಿ ಧಾರವಾಡದ ಎಸ್ ಡಿ ಎಂ ಕಾಲೇಜು ಹಾಗೂ ಬೆಂಗಳೂರಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಮೈಸೂರಿನ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿವೆ.
ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಪಡೆಯತ್ತಿರುವ 42 ಸಾವಿರ ಮಕ್ಕಳಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ಕಂಡು ಬಂದಿಲ್ಲ. ಹೀಗಾಗಿ, ಯಾವುದೇ ಭಯ ಬೇಡ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕೂಡ ನಡೆದಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿ ಗಂಟೆ ಹಾಗೂ ಅರ್ಧ ಗಂಟೆಗೊಮ್ಮೆ ಶಾಲೆಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಉಪ ನಿರ್ದೇಶಕರಿಗೆ ಸೂಚನೆಯನ್ನು ನೀಡಲಾಗಿದೆ ಎಂದರು.
ಅಲ್ಲದೆ, ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಂಪೂರ್ಣ ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳಲಾಗಿದೆ. ಈಗ ಸದ್ಯದ ಮಟ್ಟಿಗೆ ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ನೀಡುವುದಿಲ್ಲ. ತರಗತಿಗಳು ನಡೆಯುತ್ತವೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಮುಂದೆ ಏನಾದರೂ ಕ್ರಮ ಕೈಗೊಳ್ಳಬೇಕಾದರೆ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆದ ಟ್ರಕ್ ಡ್ರೈವರ್ ಗೆ ಏನಾಯ್ತು ಎನ್ನೋದು ಬಿಟ್ಟು ಬಿಟ್ಟಿ ಸಿಕ್ಕ ಜ್ಯೂಸ್‌ಗೆ ಮುಗಿಬಿದ್ದರು Video

ಎಂಥಾ ಅದ್ಭುತ ದೃಶ್ಯ: ರಸ್ತೆ ದಾಟಲು ಸಹಾಯ ಮಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಆನೆಗಳ ಹಿಂಡು Video

ಈ ವಿಷಯಕ್ಕೆ ಅನುಮತಿ ಕೇಳಿದ ಅಮೆರಿಕಾ, ನೋ ಎಂದಾ ಶ್ರೀಲಂಕಾ

₹2,929 ಕೋಟಿ ವಂಚನೆ ಪ್ರಕರಣ, ಅನಿಲ್ ಅಂಬಾನಿಗೆ ಸತತ 8ಗಂಟೆಗಳ ವಿಚಾರಣೆ

ಚೆನ್ನೈ ಭೀಕರ ರಸ್ತೆ ಅಪಘಾತ, ಗರ್ಭಿಣಿ ಸೇರಿ 8ಮಂದಿ ದುರ್ಮರಣ

ಮುಂದಿನ ಸುದ್ದಿ
Show comments