Webdunia - Bharat's app for daily news and videos

Install App

ನಾನ್-ವೆಜ್ ಆಹಾರ ಬ್ಯಾನ್ !

Webdunia
ಗುರುವಾರ, 7 ಏಪ್ರಿಲ್ 2022 (08:44 IST)
ನವದೆಹಲಿ : ಏರ್ ಇಂಡಿಯಾ  ವಿಮಾನದಲ್ಲಿ ಜೈನ ಪ್ರಯಾಣಿಕರಿಗೆ ಆಕಸ್ಮಿಕವಾಗಿ ಮಾಂಸಾಹಾರಿ ಆಹಾರವನ್ನು ನೀಡಿದ ಕೆಲವು ದಿನಗಳ ನಂತರ,

ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಜೈನ ಸಮುದಾಯವು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪತ್ರ ಬರೆದಿದ್ದು, ದೇಶೀಯ ವಿಮಾನಗಳಲ್ಲಿ ಮಾಂಸಾಹಾರ ಊಟವನ್ನು ನೀಡುವುದನ್ನು ನಿಷೇಧಿಸುವಂತೆ ಕೋರಿದೆ.

"ಸಸ್ಯಾಹಾರಿ ಪ್ರಯಾಣಿಕರ ಪರವಾಗಿ ಈ ವಿನಂತಿಯನ್ನು ಮಾಡಲಾಗುತ್ತಿದೆ. ಕಟ್ಟುನಿಟ್ಟಾದ ಸಸ್ಯಾಹಾರಿ ಪ್ರಯಾಣಿಕರಿಗೆ ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರಿ ಆಹಾರವನ್ನು ನೀಡಿದಾಗ ಹೆಚ್ಚು ತೊಂದರೆ ಮತ್ತು ಕಸಿವಿಸಿ ಅನುಭವಿಸುತ್ತಾರೆ" ಎಂದು ಮಂಡಳಿಯ ಸದಸ್ಯ ರಾಜೇಂದ್ರ ಶಾ ಪತ್ರದಲ್ಲಿ ತಿಳಿಸಿದ್ದಾರೆ.

ವಿಶೇಷವೆಂದರೆ, ಅಂತರರಾಷ್ಟ್ರೀಯ ಮಾರ್ಗದಲ್ಲಿ ಸಂಭವಿಸಿದ ಘಟನೆಗಾಗಿ ದೇಶೀಯ ವಿಮಾನಗಳಲ್ಲಿ ಮಾಂಸಾಹಾರಿ ಆಹಾರವನ್ನು ನಿಷೇಧಿಸುವಂತೆ ಗುಂಪು ಒತ್ತಾಯಿಸಿದೆ.

ಇತ್ತೀಚೆಗಷ್ಟೇ ಟ್ವಿಟರ್ನಲ್ಲಿ ತಮ್ಮ ಅನುಭವವನ್ನು ಬರೆದುಕೊಂಡಿದ್ದ ಪ್ರಯಾಣಿಕ ರಾಘವೇಂದ್ರ ಜೈನ್ ಅವರು, ಮಾರ್ಚ್ 25 ರಂದು ಏರ್ ಇಂಡಿಯಾ ವಿಮಾನದಲ್ಲಿ ಟೋಕಿಯೊದಿಂದ ದೆಹಲಿಗೆ ಕುಟುಂಬದೊಂದಿಗೆ ಪ್ರಯಾಣಿಸಿದ್ದಾಗಿ ಹೇಳಿದ್ದರು.

ತಾನು ಸಸ್ಯಾಹಾರಿ ಊಟವನ್ನು ಮೊದಲೇ ಬುಕ್ ಮಾಡಿದ್ದೆ ಮತ್ತು ಚೆಕ್-ಇನ್ ಕೌಂಟರ್ನಲ್ಲಿ ಅವುಗಳನ್ನು ಖಚಿತಪಡಿಸಿದ್ದಾರೆ ಎಂದು ಹೇಳಿದ್ದರು. ಇದರ ನಡುವೆಯೂ ಸಿಬ್ಬಂದಿ ಮಾಂಸಾಹಾರಿ ಊಟ ನೀಡಿದ್ದರು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments