ಓಮಿಕ್ರಾನ್ ಸ್ಫೋಟ!: ಒಂದೇ ಹೆಚ್ಚು ಪ್ರಕಣಗಳು ದಾಖಲು

Webdunia
ಶುಕ್ರವಾರ, 31 ಡಿಸೆಂಬರ್ 2021 (14:08 IST)
ಹೊಸ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ವರ್ಷದ ತಯಾರಿ ಆರಂಭವಾಗಿದೆ.
 
ಸೋಂಕು ಹರಡದಂತೆ ತಡೆಯಲು ನಿಯಮಗಳನ್ನೂ ಮಾಡಲಾಗಿದೆ. ಆದರೆ ಇಂದು ಒಂದೇ ದಿನ ರಾಜ್ಯದಲ್ಲಿ 23 ಮಂದಿಗೆ ಮಾರಕ ಓಮಿಕ್ರಾನ್ ಸೋಂಕು ದೃಢಪಟ್ಟಿವೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.  ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 50 ರ ಗಡಿ ದಾಟಿದೆ.

ಅಮೆರಿಕ, ಯುರೋಪ್ನಿಂದ ಬಂದಿದ್ದ ಪ್ರಯಾಣಿಕರಿಗೆ ಓಮಿಕ್ರಾನ್ ಸೋಂಕು ತಗುಲಿದೆ. ವಿದೇಶಗಳಿಂದ ಬಂದ 19 ಮಂದಿ ಪ್ರಯಾಣಿಕರಿಗೆ ಸೋಂಕು ತಗುಲಿದೆ ಎಂದು  ಟ್ವಿಟರ್ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೋನಾ ಅಬ್ಬರ ಕೂಡ ಮುಂದುವರೆದಿದೆ.  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಕೊಡಗು ಜಿಲ್ಲೆಯ ಮಡಿಕೇರಿಯ ಸಂತ ಜೋಸೆಫ್ ಶಾಲೆಯಲ್ಲಿ ಕೊರೊನಾ ಸ್ಪೋಟಗೊಂಡಿದ್ದು, ಶಾಲೆಯ 10 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ.

9 ನೇ ತರಗತಿಯ 58 ವಿದ್ಯಾರ್ಥಿಗಳಲ್ಲಿ ಹತ್ತು ಮಕ್ಕಳಿಗೆ ಪಾಸಿಟಿವ್ ಬಂದಿದ್ದು, ಉಳಿದ 600 ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಕೈಗೊಳ್ಳಲಾಗಿದೆ. ಜತೆಗೆ ಶಾಲೆಯ 20 ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಕಾಂಗ್ರೆಸ್ ನಲ್ಲಿ ನಾಯಿ ಯಾರು, ಬಾಲ ಯಾರು ಮಹದೇವಪ್ಪನವರೇ: ಆರ್ ಅಶೋಕ್

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments