Webdunia - Bharat's app for daily news and videos

Install App

ಓಮಿಕ್ರಾನ್ ಸ್ಫೋಟ!: ಒಂದೇ ಹೆಚ್ಚು ಪ್ರಕಣಗಳು ದಾಖಲು

Webdunia
ಶುಕ್ರವಾರ, 31 ಡಿಸೆಂಬರ್ 2021 (14:08 IST)
ಹೊಸ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ವರ್ಷದ ತಯಾರಿ ಆರಂಭವಾಗಿದೆ.
 
ಸೋಂಕು ಹರಡದಂತೆ ತಡೆಯಲು ನಿಯಮಗಳನ್ನೂ ಮಾಡಲಾಗಿದೆ. ಆದರೆ ಇಂದು ಒಂದೇ ದಿನ ರಾಜ್ಯದಲ್ಲಿ 23 ಮಂದಿಗೆ ಮಾರಕ ಓಮಿಕ್ರಾನ್ ಸೋಂಕು ದೃಢಪಟ್ಟಿವೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.  ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 50 ರ ಗಡಿ ದಾಟಿದೆ.

ಅಮೆರಿಕ, ಯುರೋಪ್ನಿಂದ ಬಂದಿದ್ದ ಪ್ರಯಾಣಿಕರಿಗೆ ಓಮಿಕ್ರಾನ್ ಸೋಂಕು ತಗುಲಿದೆ. ವಿದೇಶಗಳಿಂದ ಬಂದ 19 ಮಂದಿ ಪ್ರಯಾಣಿಕರಿಗೆ ಸೋಂಕು ತಗುಲಿದೆ ಎಂದು  ಟ್ವಿಟರ್ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೋನಾ ಅಬ್ಬರ ಕೂಡ ಮುಂದುವರೆದಿದೆ.  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಕೊಡಗು ಜಿಲ್ಲೆಯ ಮಡಿಕೇರಿಯ ಸಂತ ಜೋಸೆಫ್ ಶಾಲೆಯಲ್ಲಿ ಕೊರೊನಾ ಸ್ಪೋಟಗೊಂಡಿದ್ದು, ಶಾಲೆಯ 10 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ.

9 ನೇ ತರಗತಿಯ 58 ವಿದ್ಯಾರ್ಥಿಗಳಲ್ಲಿ ಹತ್ತು ಮಕ್ಕಳಿಗೆ ಪಾಸಿಟಿವ್ ಬಂದಿದ್ದು, ಉಳಿದ 600 ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಕೈಗೊಳ್ಳಲಾಗಿದೆ. ಜತೆಗೆ ಶಾಲೆಯ 20 ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments