ಇನ್ನಷ್ಟು ಆತಂಕಕ್ಕೆ ಎಡೆ ಮಾಡಿಕೊಡುತ್ತಿರುವ ಓಮೈಕ್ರಾನ್!

Webdunia
ಸೋಮವಾರ, 20 ಡಿಸೆಂಬರ್ 2021 (09:23 IST)
ಬೆಂಗಳೂರು : ಇಂದು ಮತ್ತೆ ಐದು ಹೊಸ ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಮಾಹಿತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.
 
ಈ ಬಾರಿ ಬೆಂಗಳೂರು ಹೊರತಾಗಿ ರಾಜ್ಯದ  ಇತರೆ ಜಿಲ್ಲೆಗಳು ಓಮೈಕ್ರಾನ್ ಗೆ ವ್ಯಾಪಿಸಿದೆ. ಧಾರವಾಡದ  54 ವರ್ಷದ ಪುರುಷ, ಭದ್ರಾವತಿಯ  20 ವರ್ಷದ ಯುವತಿ, ಉಡುಪಿಯ  82 ವರ್ಷದ ವೃದ್ಧ, 73 ವರ್ಷದ ವೃದ್ಧ ದಂಪತಿ ಮತ್ತು ಮಂಗಳೂರಿನ  19 ವರ್ಷದ ಯುವತಿಯಲ್ಲಿ ಓಮೈಕ್ರಾನ್ ಸೋಂಕು ದೃಢಪಟ್ಟಿದೆ. ಸದ್ಯ ರಾಜ್ಯದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಎರಡನೇ ಅಲೆಯಂತೆ ಮತ್ತೆ ವಾರ್ಡ್ ರೀತಿಯಲ್ಲಿ ವಿಂಗಡಿಸಿ ಕೊರೋನಾ ಮಟ್ಟಹಾಕಲು ಪ್ಲ್ಯಾನ್ ಮಾಡಿಕೊಂಡಿದೆ. ನಗರದ ಪ್ರಮುಖ 5 ವಾರ್ಡ್ ಗಳಲ್ಲಿ ಸರಾಸರಿ 7ಕ್ಕಿಂತ ಅಧಿಕ ಕೇಸ್ ಪ್ರತಿ ದಿನ ಪತ್ತೆಯಾಗುತ್ತಿವೆ  ಬೆಳ್ಳಂದೂರು ವಾರ್ಡ್, ದೊಡ್ಡನೆಕುಂಡಿ ವಾರ್ಡ್, ಬೇಗೂರು ವಾರ್ಡ್, ಹಗದೂರು ವಾರ್ಡ್, ಊSಖ ಲೇಔಟ್ ವಾರ್ಡ್ ನಲ್ಲಿ ಕೇಸ್ ಹೆಚ್ಚಳವಾಗಿದೆ.

ಈ ವಾರ್ಡ್ ಗಳಲ್ಲಿ ಪ್ರತಿ ದಿನ 7ಕ್ಕಿಂತ ಅಧಿಕ ಕೇಸ್ ಪತ್ತೆಯಾಗುತ್ತಿರುವ ಹಿನ್ನೆಲೆ  ರೆಡ್ ಝೋನ್ ಮಾಡಿ ಬಿಬಿಎಂಪಿ ಪ್ರದೇಶಗಳನ್ನು ಪರಿಶೀಲನೆ ನಡೆಸುತ್ತಿದೆ.ಆದ್ಯತೆ ಮೇರೆಗೆ ಈ ಐದು ವಾರ್ಡ್ ಸೇರಿದಂತೆ ಕೆಲ ವಾರ್ಡ್ ಗಳಲ್ಲಿ ಲಸಿಕೆ ಹಂಚಿಕೆ ಮಾಡಲಾಗಿದೆ. ಎರಡನೇ ಡೋಸ್ ಲಸಿಕೆ ಪೂರ್ವ ಪ್ರಮಾಣದಲ್ಲಿ ನೀಡಲು ಪಾಲಿಕೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments