Webdunia - Bharat's app for daily news and videos

Install App

ಕಣ್ಣೀರು ಹಾಕಿಸಲಿದೆ ಈರುಳ್ಳಿ!

Webdunia
ಮಂಗಳವಾರ, 23 ನವೆಂಬರ್ 2021 (10:17 IST)
ದಾವಣಗೆರೆ : ಒಂದೆಡೆ ಮುಂಗಾರು ಹಂಗಾಮಿನ ಬೆಳೆ ಕಟಾವು ಮುಗಿದಿದೆ. ಇನ್ನೊಂದೆಡೆ ಹಿಂಗಾರು ಹಂಗಾಮಿನಲ್ಲಿ ಬಿತ್ತಿದ ಈರುಳ್ಳಿ ಅತಿಯಾದ ಮಳೆಯಿಂದ ಕೊಳೆಯುತ್ತಿದೆ.
ಇಲಾಖೆ ಮಾಹಿತಿಯಂತೆ ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ 34,000 ಹೆಕ್ಟೇರ್ ಈರುಳ್ಳಿ ಬೆಳೆ ಹಾನಿಗೀಡಾಗಿದೆ. ಹೀಗಾಗಿ, ಬೆಳೆಗಾರರು ತೀವ್ರ ನಷ್ಟ ಅನುಭವಿಸುವ ಜತೆಗೆ ಈರುಳ್ಳಿ ಬೆಲೆ ಗಗನಕ್ಕೇರಲಿದ್ದು, ರೈತ-ಗ್ರಾಹಕ ಇಬ್ಬರ ಕಣ್ಣುಗಳಲ್ಲಿ ನೀರು ತರಿಸಲಿದೆ.
ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ ಸೇರಿ ರಾಜ್ಯದ ಪ್ರಮುಖ ಈರುಳ್ಳಿ ಮಾರುಕಟ್ಟೆಗಳಲ್ಲಿ ಅವಕ ಕುಸಿದಿದೆ. ರಾಜ್ಯದ ರೈತರು ಮುಂಗಾರು ಬೆಳೆಯನ್ನು ಸಂಪೂರ್ಣ ಕಟಾವು ಮಾಡಿ ಮಾರಾಟ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಈರುಳ್ಳಿ ಇಲ್ಲಿನ ಮಾರುಕಟ್ಟೆಗಳಿಗೆ ದಾಂಗುಡಿ ಇಟ್ಟಿದೆ. ರಾಜ್ಯದ ರೈತರಿಂದ ಮಂಡಿಗಳಿಗೆ ಬರುವ ಉಳ್ಳಾಗಡ್ಡಿ ಅವಕ ನಿಂತು ವಾರ ಕಳೆದಿದೆ. ಅತ್ತ ತಮಿಳುನಾಡಿನಲ್ಲೂ ಮಳೆ ಹೆಚ್ಚಾಗಿರುವ ಕಾರಣ ಅಲ್ಲಿಂದಲೂ ಬರುತ್ತಿಲ್ಲ. ಹೀಗಾಗಿ ಮಹಾರಾಷ್ಟ್ರದಿಂದ ಈರುಳ್ಳಿ ತರಿಸಿಕೊಳ್ಳುತ್ತಿದ್ದೇವೆ ಎಂದು ದಾವಣಗೆರೆಯ ಈರುಳ್ಳಿ ದಲ್ಲಾಳಿಗಳ ಸಂಘದ ಅಧ್ಯಕ್ಷ ಎನ್.ಕೆ. ಬಸವಲಿಂಗಪ್ಪ ಮಾಹಿತಿ ನೀಡಿದ್ದಾರೆ.
ಸೆಂಚೂರಿ ಬಾರಿಸಲಿದೆ ಬೆಲೆ?
'ಈಗಿನ ಪರಿಸ್ಥಿತಿ ಗಮನಿಸಿದರೆ ಮುಂಬರುವ ಒಂದು ಅಥವಾ ಎರಡು ತಿಂಗಳಲ್ಲಿ ಈರುಳ್ಳಿ ಬೆಲೆ 100 ರೂ. ತಲುಪುವ ಸಾಧ್ಯತೆ ಇದೆ. ಈ ಬಾರಿ ಎರಡೂ ಹಂಗಾಮಿನ ಬೆಳೆ ಮಳೆಗೆ ಸಿಲುಕಿ ಹಾಳಾಗಿದೆ. ಬೆಂಗಳೂರು, ದಾವಣಗೆರೆ ಮಾರುಕಟ್ಟೆಗಳಿಗೆ ತಮಿಳುನಾಡಿನಿಂದ ಹೆಚ್ಚು ಈರುಳ್ಳಿ ಬರುತ್ತಿತ್ತು. ಆದರೆ, ಈ ಬಾರಿ ಅಲ್ಲೂ ಮಳೆ ಹೆಚ್ಚಾಗಿದ್ದು, ಅಲ್ಲಿಂದ ಈರುಳ್ಳಿ ಬಂದು ಹಲವು ದಿನ ಕಳೆದಿವೆ.
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments