ಕಣ್ಣೀರು ಹಾಕಿಸಲಿದೆ ಈರುಳ್ಳಿ!

Webdunia
ಮಂಗಳವಾರ, 23 ನವೆಂಬರ್ 2021 (10:17 IST)
ದಾವಣಗೆರೆ : ಒಂದೆಡೆ ಮುಂಗಾರು ಹಂಗಾಮಿನ ಬೆಳೆ ಕಟಾವು ಮುಗಿದಿದೆ. ಇನ್ನೊಂದೆಡೆ ಹಿಂಗಾರು ಹಂಗಾಮಿನಲ್ಲಿ ಬಿತ್ತಿದ ಈರುಳ್ಳಿ ಅತಿಯಾದ ಮಳೆಯಿಂದ ಕೊಳೆಯುತ್ತಿದೆ.
ಇಲಾಖೆ ಮಾಹಿತಿಯಂತೆ ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ 34,000 ಹೆಕ್ಟೇರ್ ಈರುಳ್ಳಿ ಬೆಳೆ ಹಾನಿಗೀಡಾಗಿದೆ. ಹೀಗಾಗಿ, ಬೆಳೆಗಾರರು ತೀವ್ರ ನಷ್ಟ ಅನುಭವಿಸುವ ಜತೆಗೆ ಈರುಳ್ಳಿ ಬೆಲೆ ಗಗನಕ್ಕೇರಲಿದ್ದು, ರೈತ-ಗ್ರಾಹಕ ಇಬ್ಬರ ಕಣ್ಣುಗಳಲ್ಲಿ ನೀರು ತರಿಸಲಿದೆ.
ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ ಸೇರಿ ರಾಜ್ಯದ ಪ್ರಮುಖ ಈರುಳ್ಳಿ ಮಾರುಕಟ್ಟೆಗಳಲ್ಲಿ ಅವಕ ಕುಸಿದಿದೆ. ರಾಜ್ಯದ ರೈತರು ಮುಂಗಾರು ಬೆಳೆಯನ್ನು ಸಂಪೂರ್ಣ ಕಟಾವು ಮಾಡಿ ಮಾರಾಟ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಈರುಳ್ಳಿ ಇಲ್ಲಿನ ಮಾರುಕಟ್ಟೆಗಳಿಗೆ ದಾಂಗುಡಿ ಇಟ್ಟಿದೆ. ರಾಜ್ಯದ ರೈತರಿಂದ ಮಂಡಿಗಳಿಗೆ ಬರುವ ಉಳ್ಳಾಗಡ್ಡಿ ಅವಕ ನಿಂತು ವಾರ ಕಳೆದಿದೆ. ಅತ್ತ ತಮಿಳುನಾಡಿನಲ್ಲೂ ಮಳೆ ಹೆಚ್ಚಾಗಿರುವ ಕಾರಣ ಅಲ್ಲಿಂದಲೂ ಬರುತ್ತಿಲ್ಲ. ಹೀಗಾಗಿ ಮಹಾರಾಷ್ಟ್ರದಿಂದ ಈರುಳ್ಳಿ ತರಿಸಿಕೊಳ್ಳುತ್ತಿದ್ದೇವೆ ಎಂದು ದಾವಣಗೆರೆಯ ಈರುಳ್ಳಿ ದಲ್ಲಾಳಿಗಳ ಸಂಘದ ಅಧ್ಯಕ್ಷ ಎನ್.ಕೆ. ಬಸವಲಿಂಗಪ್ಪ ಮಾಹಿತಿ ನೀಡಿದ್ದಾರೆ.
ಸೆಂಚೂರಿ ಬಾರಿಸಲಿದೆ ಬೆಲೆ?
'ಈಗಿನ ಪರಿಸ್ಥಿತಿ ಗಮನಿಸಿದರೆ ಮುಂಬರುವ ಒಂದು ಅಥವಾ ಎರಡು ತಿಂಗಳಲ್ಲಿ ಈರುಳ್ಳಿ ಬೆಲೆ 100 ರೂ. ತಲುಪುವ ಸಾಧ್ಯತೆ ಇದೆ. ಈ ಬಾರಿ ಎರಡೂ ಹಂಗಾಮಿನ ಬೆಳೆ ಮಳೆಗೆ ಸಿಲುಕಿ ಹಾಳಾಗಿದೆ. ಬೆಂಗಳೂರು, ದಾವಣಗೆರೆ ಮಾರುಕಟ್ಟೆಗಳಿಗೆ ತಮಿಳುನಾಡಿನಿಂದ ಹೆಚ್ಚು ಈರುಳ್ಳಿ ಬರುತ್ತಿತ್ತು. ಆದರೆ, ಈ ಬಾರಿ ಅಲ್ಲೂ ಮಳೆ ಹೆಚ್ಚಾಗಿದ್ದು, ಅಲ್ಲಿಂದ ಈರುಳ್ಳಿ ಬಂದು ಹಲವು ದಿನ ಕಳೆದಿವೆ.
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕ ವಿದ್ಯುತ್‌ ಶಾಕ್‌ಗೆ ಬಲಿ

ಮುಂದಿನ ಸುದ್ದಿ
Show comments