Webdunia - Bharat's app for daily news and videos

Install App

ಕಣ್ಣೀರು ಹಾಕಿಸಲಿದೆ ಈರುಳ್ಳಿ!

Webdunia
ಮಂಗಳವಾರ, 23 ನವೆಂಬರ್ 2021 (10:17 IST)
ದಾವಣಗೆರೆ : ಒಂದೆಡೆ ಮುಂಗಾರು ಹಂಗಾಮಿನ ಬೆಳೆ ಕಟಾವು ಮುಗಿದಿದೆ. ಇನ್ನೊಂದೆಡೆ ಹಿಂಗಾರು ಹಂಗಾಮಿನಲ್ಲಿ ಬಿತ್ತಿದ ಈರುಳ್ಳಿ ಅತಿಯಾದ ಮಳೆಯಿಂದ ಕೊಳೆಯುತ್ತಿದೆ.
ಇಲಾಖೆ ಮಾಹಿತಿಯಂತೆ ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ 34,000 ಹೆಕ್ಟೇರ್ ಈರುಳ್ಳಿ ಬೆಳೆ ಹಾನಿಗೀಡಾಗಿದೆ. ಹೀಗಾಗಿ, ಬೆಳೆಗಾರರು ತೀವ್ರ ನಷ್ಟ ಅನುಭವಿಸುವ ಜತೆಗೆ ಈರುಳ್ಳಿ ಬೆಲೆ ಗಗನಕ್ಕೇರಲಿದ್ದು, ರೈತ-ಗ್ರಾಹಕ ಇಬ್ಬರ ಕಣ್ಣುಗಳಲ್ಲಿ ನೀರು ತರಿಸಲಿದೆ.
ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ ಸೇರಿ ರಾಜ್ಯದ ಪ್ರಮುಖ ಈರುಳ್ಳಿ ಮಾರುಕಟ್ಟೆಗಳಲ್ಲಿ ಅವಕ ಕುಸಿದಿದೆ. ರಾಜ್ಯದ ರೈತರು ಮುಂಗಾರು ಬೆಳೆಯನ್ನು ಸಂಪೂರ್ಣ ಕಟಾವು ಮಾಡಿ ಮಾರಾಟ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಈರುಳ್ಳಿ ಇಲ್ಲಿನ ಮಾರುಕಟ್ಟೆಗಳಿಗೆ ದಾಂಗುಡಿ ಇಟ್ಟಿದೆ. ರಾಜ್ಯದ ರೈತರಿಂದ ಮಂಡಿಗಳಿಗೆ ಬರುವ ಉಳ್ಳಾಗಡ್ಡಿ ಅವಕ ನಿಂತು ವಾರ ಕಳೆದಿದೆ. ಅತ್ತ ತಮಿಳುನಾಡಿನಲ್ಲೂ ಮಳೆ ಹೆಚ್ಚಾಗಿರುವ ಕಾರಣ ಅಲ್ಲಿಂದಲೂ ಬರುತ್ತಿಲ್ಲ. ಹೀಗಾಗಿ ಮಹಾರಾಷ್ಟ್ರದಿಂದ ಈರುಳ್ಳಿ ತರಿಸಿಕೊಳ್ಳುತ್ತಿದ್ದೇವೆ ಎಂದು ದಾವಣಗೆರೆಯ ಈರುಳ್ಳಿ ದಲ್ಲಾಳಿಗಳ ಸಂಘದ ಅಧ್ಯಕ್ಷ ಎನ್.ಕೆ. ಬಸವಲಿಂಗಪ್ಪ ಮಾಹಿತಿ ನೀಡಿದ್ದಾರೆ.
ಸೆಂಚೂರಿ ಬಾರಿಸಲಿದೆ ಬೆಲೆ?
'ಈಗಿನ ಪರಿಸ್ಥಿತಿ ಗಮನಿಸಿದರೆ ಮುಂಬರುವ ಒಂದು ಅಥವಾ ಎರಡು ತಿಂಗಳಲ್ಲಿ ಈರುಳ್ಳಿ ಬೆಲೆ 100 ರೂ. ತಲುಪುವ ಸಾಧ್ಯತೆ ಇದೆ. ಈ ಬಾರಿ ಎರಡೂ ಹಂಗಾಮಿನ ಬೆಳೆ ಮಳೆಗೆ ಸಿಲುಕಿ ಹಾಳಾಗಿದೆ. ಬೆಂಗಳೂರು, ದಾವಣಗೆರೆ ಮಾರುಕಟ್ಟೆಗಳಿಗೆ ತಮಿಳುನಾಡಿನಿಂದ ಹೆಚ್ಚು ಈರುಳ್ಳಿ ಬರುತ್ತಿತ್ತು. ಆದರೆ, ಈ ಬಾರಿ ಅಲ್ಲೂ ಮಳೆ ಹೆಚ್ಚಾಗಿದ್ದು, ಅಲ್ಲಿಂದ ಈರುಳ್ಳಿ ಬಂದು ಹಲವು ದಿನ ಕಳೆದಿವೆ.
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments