Webdunia - Bharat's app for daily news and videos

Install App

ಈ ವರ್ಷದ ಚಾರ್ಧಾಮ್ ಯಾತ್ರೆಗೆ ತೆರೆ!

Webdunia
ಬುಧವಾರ, 3 ನವೆಂಬರ್ 2021 (16:32 IST)
ಹಿಮಾಲಯದ ತಪ್ಪಲಿನ ಪ್ರಮುಖ ನಾಲ್ಕು ತೀರ್ಥ ಕ್ಷೇತ್ರಗಳಾದ, 'ಚಾರ್ ಧಾಮ್' ಗಳೆಂದೇ ಜನಪ್ರಿಯವಾಗಿರುವ ಗಂಗೋತ್ರಿ, ಯಮುನೋತ್ರಿ, ಕೇದರ ನಾಥ ಮತ್ತು ಬದ್ರಿ ನಾಥ ದೇಗುಲಗಳಿಗೆ ವಾಡಿಕೆಯಂತೆ ಬಾಗಿಲು ಹಾಕಲಾಗುತ್ತಿದೆ.
ಚಳಿಗಾಲ ಆಗಮಿಸುತ್ತಿದ್ದಂತೆಯೇ ಹಿಮಾಲಯ ಹಿಮದ ಹೊದಿಕೆ ಹೊದ್ದುಕೊಳ್ಳುವುದರಿಂದ ಈ ಯಾತ್ರಾ ಕ್ಷೇತ್ರಗಳು ಕೂಡ ಹಿಮ ಮಯವಾಗಲಿವೆ. ಹೀಗಾಗಿ ದೇಗುಲದ ಬಾಗಿಲನ್ನು ಹಾಕಲಾಗುತ್ತದೆ. ಭಕ್ತರಿಗೂ ದೇಗುಲ ಭೇಟಿಗೆ ಅವಕಾಶ ನೀಡಲಾಗುವುದಿಲ್ಲ.
ಇನ್ನು ಮುಂದಿನ ವರ್ಷ ಮೇ ಬಳಿಕ ಒಂದೊಂದಾಗಿ ದೇಗುಲಗಳ ಬಾಗಿಲು ತೆರೆಯಲಾಗುತ್ತದೆ. ಬಾಗಿಲು ಹಾಕುವ ಮತ್ತು ತೆರೆಯುವ ಸಂದರ್ಭದಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ.
ಗಂಗೋತ್ರಿ ದೇಗುಲಕ್ಕೆ ದೀಪಾವಳಿಯ ಮಾರನೆಯ ದಿನ (ನವೆಂಬರ್ 5) ಗೋವರ್ಧನ ಪೂಜೆಯ ಬಳಿಕ ಬಾಗಿಲು ಹಾಕಲಾಗಿದೆ. ಯಮುನೋತ್ರಿ ಮತ್ತು ಕೇದರನಾಥ ದೇಗುಲಗಳಿಗೆ ನವೆಂಬರ್ 6 ರಂದು ಬಾಗಿಲು ಹಾಕಲಾಗುತ್ತದೆ. ಬದ್ರಿ ನಾಥ ದೇಗುಲಕ್ಕೆ ನವೆಂಬರ್ 20 ರಂದು ಬಾಗಿಲು ಹಾಕಲಾಗುತ್ತದೆ. ಈ ಮೂಲಕ ಈ ಋುತುವಿನ 'ಚಾರ್ ಧಾಮ್' ಯಾತ್ರೆಯು ಕೊನೆಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments