ಬಂದೂಕುಗಳನ್ನು ಹೊಂದಲು ಅವಕಾಶ : ಸುಪ್ರೀಂ

Webdunia
ಮಂಗಳವಾರ, 29 ಮಾರ್ಚ್ 2022 (14:20 IST)
ನವದೆಹಲಿ : ಪರವಾನಗಿ ಇಲ್ಲದೆ ಬಂದೂಕುಗಳನ್ನು ಹೊಂದಲು ಮತ್ತು ಸಾಗಿಸಲು ಕೊಡವ ಸಮುದಾಯದವರಿಗೆ ನೀಡಿದ ಅವಕಾಶವನ್ನು ಪ್ರಶ್ನೆ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು,
 
ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ. ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕೊಡವರಿಗೆ ನೀಡಿದ ಅನುಮತಿ ಸಾಂವಿಧಾನಿಕ ಸಿಂಧುತ್ವ ಹೊಂದಿದೆ. ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ನಿವೃತ್ತ ಕ್ಯಾಪ್ಟನ್ ಚೇತನ ವೈ.ಕೆ. ಎನ್ನುವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿ ಈ ಸಂಬಂಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

ಜಾತಿ, ಜನಾಂಗದ ಪೂರ್ವಿಕರ ಭೂ ಒಡೆತನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ. ಇದು ಸಂವಿಧಾನದ 14, 15 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ.

ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್ 41ರ ಪ್ರಕಾರ, ಸಾರ್ವಜನಿಕ ಹಿತಾಸಕ್ತಿಯಿಂದ ಮಾತ್ರ ಶಸ್ತ್ರಾಸ್ತ್ರ ಪರವಾನಗಿ ಪಡೆಯುವುದರಿಂದ ವಿನಾಯಿತಿ ನೀಡಬಹುದು.

ಆದರೆ, ಕೊಡವ ಸಮುದಾಯಕ್ಕೆ ಅಂತಹ ವಿನಾಯಿತಿ ನೀಡುವ ಕುರಿತು ಅಧಿಸೂಚನೆಯಲ್ಲಿ ಯಾವುದೇ ಕಾರಣವನ್ನು ನೀಡಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. 

ಸಮರ ಸಮುದಾಯವಾಗಿರುವ ಕೊಡವ ಸಮುದಾಯವು ಸ್ವಾತಂತ್ರ್ಯ ಪೂರ್ವದಿಂದಲೂ ಜುಮ್ಮಾ ಹಿಡುವಳಿದಾರರು, ಅಂದಿನಿಂದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments