Webdunia - Bharat's app for daily news and videos

Install App

ಮಕ್ಕಳ ದತ್ತು ಸ್ವೀಕಾರಕ್ಕೆ ಪೋಷಕರ ತುಡಿತ

Webdunia
ಸೋಮವಾರ, 9 ಮೇ 2022 (12:11 IST)
ಮಡಿಕೇರಿ : ಮೂರು-ನಾಲ್ಕು ವರ್ಷಗಳ ಅತಿವೃಷ್ಟಿ ಮತ್ತು ಕೊರೊನಾ ಸಂಕಷ್ಟದ ದಿನಗಳ ನಂತರ ಇದೀಗ ಕೊಡಗಿನಲ್ಲಿ ಮಕ್ಕಳನ್ನು ದತ್ತು ಸ್ವೀಕರಿಸುವ ಪೋಷಕರ ಸಂಖ್ಯೆಯೂ ಹೆಚ್ಚಾಗಿದೆ.

ಕೊಡಗು ಜಿಲ್ಲೆಯಲ್ಲದೇ ಹೊರ ಜಿಲ್ಲೆಗಳಿಂದಲೂ ಆನ್ಲೈನ್ ಅರ್ಜಿ ಸಲ್ಲಿಸಿ ಮಗುವನ್ನು ದತ್ತು ಪಡೆದುಕೊಳ್ಳಲು ಮಾತೃ ಹೃದಯಗಳು ಮುಂದಾಗುತ್ತಿವೆ. ಕಳೆದ ಐದು ವರ್ಷಗಳಲ್ಲಿ 48 ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕರಿಸಲು ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಕೊಡಗಿನಲ್ಲಿಯೂ ದತ್ತು ಸ್ವೀಕಾರದ ಮನೋಭಾವ ಮುಕ್ತವಾಗಿ ವ್ಯಾಪಿಸಿಕೊಳ್ಳುತ್ತಿರುವುದು ಈ ಮೂಲಕ ಸಾಬೀತಾಗುತ್ತಿದೆ.  ಹೌದು, ಕೊಡಗು ಜಿಲ್ಲೆಯಲ್ಲಿ ಸುಮಾರು 48 ಪೋಷಕರು ಸಲ್ಲಿಸಿದ್ದ ಅರ್ಜಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಜನರು ತಾವು ತಂದೆ-ತಾಯಿಗಳಾಗಿ ಅನುಭವಿಸುವ ಸುಖವನ್ನು ದತ್ತು ಸ್ವೀಕಾರದ ಮೂಲಕ ತುಂಬಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಕೆಲವು ತಿಂಗಳ ಹಿಂದೆಯಷ್ಟೆ? ಸ್ಥಾಪನೆಯಾದ ಮಡಿಲು ದತ್ತು ಸ್ವೀಕಾರ ಸಂಸ್ಥೆಯ ಅಧೀನದಲ್ಲಿ ನಾಲ್ಕು ಮಕ್ಕಳು ತಮಗೆ ಸಿಗಬೇಕಾದ ತಂದೆ ತಾಯಿಗಳ ಪ್ರೀತಿಗಾಗಿ ಹಾತೊರೆಯುತ್ತಿವೆ.

ಜುಲೈ 2021ರಲ್ಲಿ ಸ್ಥಾಪನೆಯಾದ ಮಡಿಲು ಸಂಸ್ಥೆಯಿಂದ ಮಗುವೊಂದು ಪ್ರಥಮವಾಗಿ ತಂದೆ-ತಾಯಿಯ ಮಡಿಲಿನ ಆಶ್ರಯ ಪಡೆದುಕೊಂಡಿದೆ ಎಂದು ಇಲ್ಲಿನ ಅಧಿಕಾರಿಗಳು ಹರ್ಷಗೊಂಡಿದ್ದಾರೆ.

ಈ ಹಿಂದೆ ಕೊಡಗಿನಲ್ಲಿ ಸಂಸ್ಥೆ ಇಲ್ಲದೆ ಪುತ್ತೂರು, ಹಾಸನ ಅಥವಾ ಇತರ ಹೊರ ಜಿಲ್ಲೆಗಳಿಂದ ದತ್ತು ಸ್ವೀಕಾರಕ್ಕೆ ಸಲ್ಲಿಕೆಯಾದ ಅರ್ಜಿಗೆ ಮಕ್ಕಳನ್ನು ಪೋಷಕರ ಮಡಿಲಿಗೆ ಹಾಕುವ ಕಾರ್ಯ ನಡೆಯುತ್ತಿತ್ತು.

ಇದೀಗ ಕೊಡಗಿನಲ್ಲಿಯೇ ದತ್ತು ಸ್ವೀಕಾರ ಸಂಸ್ಥೆ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ದತ್ತು ಸ್ವೀಕಾರ ಕಾರ್ಯ ಸುಗಮವಾಗಿ ಕಾನೂನು ನಿಯಮದಂತೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments