Webdunia - Bharat's app for daily news and videos

Install App

ಲಸಿಕೆ ಹಾಕಿಸಲು ಪೋಷಕರ ಹಿಂದೇಟು!

Webdunia
ಸೋಮವಾರ, 28 ಮಾರ್ಚ್ 2022 (09:30 IST)
ಬೆಂಗಳೂರು : ರಾಜ್ಯದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರಿಂದ ರಕ್ಷಣೆ ನೀಡಲು ಆರಂಭಿಸಿರುವ ಲಸಿಕಾ ಅಭಿಯಾನಕ್ಕೆ ಇನ್ನೂ ನಿರೀಕ್ಷಿತ ವೇಗ ದೊರೆತಿಲ್ಲ.

ಮಾ.16ರಿಂದ ಅಭಿಯಾನ ಆರಂಭಗೊಂಡಿದ್ದರೂ ರಾಜ್ಯದಲ್ಲಿನ 20 ಲಕ್ಷ ಮಕ್ಕಳ ಪೈಕಿ ಈವರೆಗೆ 1.14 ಲಕ್ಷ ಮಕ್ಕಳು ಮಾತ್ರ ಲಸಿಕೆ ಪಡೆದಿದ್ದಾರೆ. ಸದ್ಯ ಶೇ.5 ರಷ್ಟುಮಾತ್ರ ಸಾಧನೆಯಾಗಿದೆ.

ಸದ್ಯ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡುತ್ತಿರುವುದು, ಪರೀಕ್ಷೆ ನಡೆಯುತ್ತಿರುವುದು, ಚಿಕ್ಕಮಕ್ಕಳಿಗೆ ಲಸಿಕೆ ಕೊಡಿಸಲು ಪೋಷಕರು ಹಿಂಜರಿಯುತ್ತಿರುವ ಪರಿಣಾಮ ಲಸಿಕೆ ನೀಡಿಕೆ ಪ್ರಮಾಣ ಕಡಿಮೆಯಾಗಿದೆ.

ಜೊತೆಗೆ ಸದ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಸಹ ಲಸಿಕೆ ಕೊಡಿಸಲು ಉದಾಸೀನ ಮಾಡುತ್ತಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಲಸಿಕೆ ಪಡೆದ ಮಕ್ಕಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಹಾವೇರಿಯಲ್ಲಿ ಕೇವಲ 23, ಬೀದರ್ನಲ್ಲಿ 24, ಶಿವಮೊಗ್ಗ 40, ಬಾಗಲಕೋಟೆ 58, ಮಂಡ್ಯ 63 ಮತ್ತು ದಾವಣಗೆರೆಯಲ್ಲಿ 88 ಮಂದಿ ಮಕ್ಕಳು ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2.81 ಲಕ್ಷ ಮಕ್ಕಳಿದ್ದರೂ ಲಸಿಕೆ ಪಡೆದಿರುವುದು 7,741 ಮಂದಿ ಮಾತ್ರ.

ಉಳಿದಂತೆ ಕೋಲಾರದಲ್ಲಿ 13,499, ಬಳ್ಳಾರಿ 10,629, ಚಾಮರಾಜ ನಗರ 10,072, ತುಮಕೂರು 9,442 ಮಕ್ಕಳು ಲಸಿಕೆ ಪಡೆದಿದ್ದಾರೆ. ಈವರೆಗೆ ಲಸಿಕೆ ಪಡೆದ ರಾಜ್ಯದ ಮಕ್ಕಳಲ್ಲಿ ಈ ಐದು ಜಿಲ್ಲೆಗಳ ಪಾಲು ಹೆಚ್ಚು ಕಡಿಮೆ ಅರ್ಧದಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments