Webdunia - Bharat's app for daily news and videos

Install App

ಮಳೆ ನಿಂತು ಹೋದ ಮೇಲೆ... ಕೊಡಗಿನ ಜನರಿಗೆ ಈಗ ಭವಿಷ್ಯದ ಪ್ರಶ್ನೆ

Webdunia
ಬುಧವಾರ, 22 ಆಗಸ್ಟ್ 2018 (09:02 IST)
ಕೊಡಗು: ಮಳೆ ಬಂತು.. ನೆರೆಯೂ ಬಂತು.. ಮನೆ ಮಠ, ಆಸ್ತಿ, ಜಮೀನು ಎಲ್ಲವೂ ಕೊಚ್ಚಿ ಹೋಯಿತು. ಇದೀಗ ಕೊಡಗಿನ ಜನರಿಗೆ ಜೀವನ ಮುಂದೆ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಪ್ರವಾಹ ಬಂದು ನಿರಾಶ್ರಿತರ ಶಿಬಿರದಲ್ಲಿ ಕಾಲ ಕಳೆಯುತ್ತಿರುವ ಜನರಿಗೆ ಸದ್ಯಕ್ಕೆ ಹೊಟ್ಟೆ ತುಂಬಿಸಿಕೊಳ್ಳಲು ದಾನಿಗಳು ಸಹಾಯ ಮಾಡುತ್ತಿದ್ದಾರೆ. ಆದರೆ ಅವರ ದೊಡ್ಡ ಅಗತ್ಯ ಭವಿಷ್ಯದಲ್ಲಿ ಜೀವನ ಶೂನ್ಯದಿಂದ ಕಟ್ಟಿಕೊಳ್ಳಲು ಸಹಾಯ ಬೇಕಾಗಿದೆ.

ಮನೆ ಪತ್ರ, ಪಡಿತರ ಚೀಟಿ ಸೇರಿದಂತೆ ಇತರ ಸರ್ಕಾರಿ ದಾಖಲೆ ಪತ್ರಗಳು, ಮನೆ, ಜಮೀನು ಎಲ್ಲವೂ ಮರಳಿ ಪಡೆಯಬೇಕಾಗಿದೆ. ಇದಕ್ಕಾಗಿಯೇ ಸರ್ಕಾರ ಇದೀಗ ಸಂತ್ರಸ್ತರಿಗಾಗಿ ಶೀಘ್ರವೇ ಪಡಿತರ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಅದರ ಜತೆಗೇ ನಿರಾಶ್ರಿತರಿಗೆ ಮನೆ ಕಟ್ಟಿಕೊಡಲು ಯೋಜನೆ ರೂಪಿಸಿದೆ.

ಇದಕ್ಕೆಲ್ಲಾ ಕನಿಷ್ಠವೆಂದರೂ ತಿಂಗಳುಗಳೇ ಬೇಕು. ಇದರ ನಡುವೆ ತಮ್ಮ ಬದುಕು ಸವೆಸುವುದು  ಹೇಗೆ ಎಂಬ ಚಿಂತೆ ಕೊಡಗಿನ ಜನತೆಯನ್ನು ಕಾಡುತ್ತಿದೆ. ಎಲ್ಲವನ್ನೂ ಶುರುವಿನಿಂದಲೇ ಕಟ್ಟಿಕೊಳ್ಳಬೇಕಲ್ಲಾ ಎಂಬ ಚಿಂತೆಯಲ್ಲಿ ಕೊಡಗಿನ ಜನ ಕಣ್ಣೀರಿಡುತ್ತಿದ್ದಾರೆ. ರಸ್ತೆ ರಿಪೇರಿ, ಮನೆ ಶುಚಿ ಕಾರ್ಯ ಇಂತಹ ಕೆಲಸಗಳಿಗೆ ಸರ್ಕಾರ ಈಗಾಗಲೇ ತನ್ನ ಕಾರ್ಯ ಶುರು ಮಾಡಿದೆ. ಹಾಗಿದ್ದರೂ ಇದೆಲ್ಲಾ ಸುಲಭದ ಮಾತಲ್ಲ. ಭವಿಷ್ಯದ ಚಿಂತೆಯಲ್ಲಿ ಕೊಡಗಿನ ಜನ ಇದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments