ಕೂಡಲೇ ಜನರು 3ನೇ ಡೋಸ್ ತೆಗೆದುಕೊಳ್ಳಬೇಕು : ಸುಧಾಕರ್

Webdunia
ಮಂಗಳವಾರ, 26 ಏಪ್ರಿಲ್ 2022 (08:46 IST)
ಬೆಂಗಳೂರು : ಕೊರೊನಾ ಒಂದು ವಾರದಿಂದ ಜಾಸ್ತಿ ಆಗ್ತಿದೆ. ನಾಳೆ ಪ್ರಧಾನಿಗಳು ಎಲ್ಲಾ ರಾಜ್ಯಗಳ ಸಿಎಂ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಿತಿಗತಿ ಬಗ್ಗೆ ಅವಲೋಕನೆ ಮಾಡುತ್ತಾರೆ. ಕೊರೊನಾ 4ನೇ ಅಲೆ ತಡೆಗೆ ಮುನ್ನೆಚ್ಚರಿಕಾ ಕ್ರಮ ಹೇಗೆ ಮಾಡಬೇಕು ಅಂತ ನಾಳೆಯ ಸಭೆಯಲ್ಲಿ ಪಿಎಂ ಹೇಳ್ತಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3ನೇ ಅಲೆಯಲ್ಲಿ ಹೆಚ್ಚು ಸಾವು ನೋವು ಜಾಸ್ತಿ ಆಗಿರಲಿಲ್ಲ. ಅದಕ್ಕೆ ಲಸಿಕೆ ಅಭಿಯಾನ ಕಾರಣ. ರಾಜ್ಯದಲ್ಲಿ 10 ಕೋಟಿ ಲಸಿಕೆ ಕೊಟ್ಟಿದ್ದೇವೆ.

ಲಸಿಕೆ ತೆಗೆದುಕೊಂಡರೆ ಕೊರೊನಾ ಬರಲ್ಲ ಅಂತ ಅಲ್ಲ. ಆದರೆ ತೀವ್ರ ತರವಾದ ಸಮಸ್ಯೆ ಇರಲ್ಲ. ನಾಳೆ ಪ್ರಧಾನಿಗಳ ಸಭೆ ಬಳಿಕ ಪ್ರಧಾನಿಗಳು ನಿಡುವ ಸಲಹೆಗಳನ್ನ ರಾಜ್ಯದಲ್ಲಿ ಅನುಷ್ಠಾನ ಮಾಡುತ್ತೇವೆ ಎಂದರು.

ಲಸಿಕೆ ತಗೊಂಡರೆ ಇನ್ಫೆಕ್ಷನ್ ಆಗಬಹುದು. ಅಷ್ಟೆ ದೊಡ್ಡ ಪ್ರಮಾಣದ ಸಮಸ್ಯೆ ಆಗಲ್ಲ. ಎರಡು ಡೋಸ್ ಲಸಿಕೆ ಜನರು ಕಡ್ಡಾಯವಾಗಿ ಪಡೆಯಬೇಕು. 3 ನೇ ಡೋಸ್ 55% ಮಾತ್ರ ಆಗಿದೆ. ಕೂಡಲೇ ಜನರು 3ನೇ ಡೋಸ್ ತೆಗೆದುಕೊಳ್ಳಬೇಕು.

4ನೇ ಅಲೆ ಬರೋವರೆಗೂ ಯಾರೂ ಕಾಯಬೇಡಿ. ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ರಾಜ್ಯದಲ್ಲಿ ಲಕ್ಷಾಂತರ ಡೋಸ್ ಲಸಿಕೆ ನಮ್ಮ ಬಳಿ ಇದೆ. ಲಸಿಕೆ ಕೊರತೆ ಇಲ್ಲ. ಜನರು ಲಸಿಕೆ ಕಡ್ಡಾಯವಾಗಿ ಪಡೆಯಬೇಕು. ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಒಳಾಂಗಣದಲ್ಲಿ, ಜನರು ಇರೋ ಕಡೆ, ಗುಂಪು ಇರುವ ಕಡೆ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಮದಾಸೆ ತೀರಿಸು ಎಂದು ಕಾಟ ಕೊಡ್ತಿದ್ದ ಮಾವ.. ಸೊಸೆ ಮಾಡಿದ ಕೆಲಸವೇನು ಗೊತ್ತಾ Video

ಬೇಕಿತ್ತಾ ಇಂಥಾ ಹುಚ್ಚುತನ.. ಬೆಟ್ಟದ ತುದಿಯಲ್ಲಿ ಸಮರ್ ಸಾಲ್ಟ್, ಯುವಕನ ಗತಿ ಏನಾಯ್ತು ನೋಡಿ Video

ರೈಲಿನಲ್ಲಿ ಚುಡಾಯಿಸಿದ್ದಕ್ಕೆ ಯುವಕನಿಗೆ ಯುವತಿ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ಶಾಕ್ ಆಗ್ತೀರಿ video

ತಿರುವನಂತಪುರಂ ಹೋಟೆಲ್ ಲಿಫ್ಟ್ನಲ್ಲಿ ಸಿಲುಕಿದ ಶಶಿ ತರೂರ್: ರಕ್ಷಿಸಿದ ಅಗ್ನಿಶಾಮಕ ದಳದವರಿಗೆ ಕೊನೆಗೆ ಏನು ಮಾಡಿದ್ರು ಗೊತ್ತಾ Video

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments