Select Your Language

Notifications

webdunia
webdunia
webdunia
webdunia

ಸೌಮ್ಯಾ ರೆಡ್ಡಿ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿ ದ್ದಕ್ಕೆ ಜನರು ಬೆಂಬಲಿಸಿದ್ದಾರೆ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸೌಮ್ಯಾ ರೆಡ್ಡಿ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿ ದ್ದಕ್ಕೆ ಜನರು ಬೆಂಬಲಿಸಿದ್ದಾರೆ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು , ಬುಧವಾರ, 13 ಜೂನ್ 2018 (13:31 IST)
ಬೆಂಗಳೂರು : ಜಯನಗರದ  ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರ ನಗರ ಹಾಗೂ ಜಯನಗರ ಎರಡೂ ಕ್ಷೇತ್ರಗಳು ಕಳೆದ ತಿಂಗಳು ಚುನಾವಣೆ ನಡೆದಿದ್ದರೂ ಕಾಂಗ್ರೆಸ್‌ಪಕ್ಷ ಗೆಲುವು ಸಾಧಿಸುತ್ತಿತ್ತು. ಸೌಮ್ಯಾ ರೆಡ್ಡಿ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿ ಉತ್ಸಾಹಕರಾಗಿದ್ದಾರೆ ಹಾಗಾಗಿ ಆ ಕ್ಷೇತ್ರದ ಜನ ಅವರನ್ನು ಬೆಂಬಲಿಸಿದ್ದಾರೆ. ಬಿಜೆಪಿಗೆ ಇಲ್ಲಿ ಯಾವುದೇ ಅನುಕಂಪದ ಅಲೆ ಇರಲಿಲ್ಲ. ಯಡಿಯೂರಪ್ಪರಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಿಗಲಿಲ್ಲ ಎಂಬ ಕಾರಣಕ್ಕೆ ಅನುಕಂಪದ ಅಲೆ ಮೂಡುವುದಿಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
                                                   

Share this Story:

Follow Webdunia kannada

ಮುಂದಿನ ಸುದ್ದಿ

ಟ್ರಂಪ್- ಕಿಮ್ ಭೇಟಿ ; ಸಂಪೂರ್ಣ ಅಣ್ವಸ್ತ್ರ ನಿಷೇಧಕ್ಕೆ ಒಪ್ಪಿಕೊಂಡ ಕಿಮ್