ಗಗನಕ್ಕೇರಿದ ಪೆಟ್ರೋಲ್ ಬೆಲೆ!

ಮತ್ತೆ ಗಗನಕ್ಕೇರಿದ ಪೆಟ್ರೋಲ್ ಬೆಲೆ; ಡೀಸೆಲ್ ಬೆಲೆಯೇರಿಕೆಗೆ ಬ್ರೇಕ್

Webdunia
ಶುಕ್ರವಾರ, 2 ಜುಲೈ 2021 (10:14 IST)
Fuel Price Today: ಭಾರತದಲ್ಲಿ ಒಂದೆಡೆ ಕೊರೋನಾ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನ ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಬಂದಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ.

 ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಜೈಪುರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106 ರೂ. ಆಗುವ ಮೂಲಕ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್ 102 ರೂ. ಆಗಿದೆ.ಇಂದು ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...
ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಒರಿಸ್ಸಾ, ಕೇರಳ, ಆಂಧ್ರಪ್ರದೇಶ, ಲಡಾಖ್, ಬಿಹಾರ, ಜಮ್ಮು ಕಾಶ್ಮೀರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ಗೆ 102 ರೂ. ಆಗಿದೆ. ಇಂದು ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.16 ರೂ. ಇದೆ. ಕೊಲ್ಕತ್ತಾದಲ್ಲಿ 99.04 ರೂ., ಮುಂಬೈನಲ್ಲಿ 105.24 ರೂ., ಚೆನ್ನೈನಲ್ಲಿ 100.13 ರೂ., ನೋಯ್ಡಾದಲ್ಲಿ 96.39 ರೂ., ಬೆಂಗಳೂರಿನಲ್ಲಿ 102.48 ರೂ., ಭುವನೇಶ್ವರದಲ್ಲಿ 99.77 ರೂ., ಹೈದರಾಬಾದ್ನಲ್ಲಿ 103.05 ರೂ., ಜೈಪುರದಲ್ಲಿ 106.18 ರೂ., ಲಕ್ನೋದಲ್ಲಿ 96.31 ರೂ., ಪಾಟ್ನಾದಲ್ಲಿ 101.49 ರೂ., ತಿರುವನಂತಪುರದಲ್ಲಿ 100.87 ರೂ. ಆಗಿದೆ.




ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಈಗಾಗಲೇ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ ಬೆಲೆ 89.18 ರೂ. ಇದೆ. ಚೆನ್ನೈನಲ್ಲಿ 93.72 ರೂ, ಮುಂಬೈನಲ್ಲಿ 96.72 ರೂ, ಬೆಂಗಳೂರಿನಲ್ಲಿ 94.54 ರೂ, ಹೈದರಾಬಾದ್ನಲ್ಲಿ 97.20 ರೂ. ಇದೆ.
ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments