Webdunia - Bharat's app for daily news and videos

Install App

ರಾಹುಲ್ ಗಾಂಧಿ ಧ್ವೇಷದ ವ್ಯಾಪಾರಿ: ಸಚಿವ ಪಿಯೂಷ್ ಗೋಯಲ್ ತಿರುಗೇಟು

Webdunia
ಮಂಗಳವಾರ, 24 ಜುಲೈ 2018 (09:07 IST)
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಥಳಿಸಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಧಾನಿ ಮೋದಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿರುಗೇಟು ನೀಡಿದ್ದಾರೆ.

ಅಲ್ವಾರ್ ಥಳಿತ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ರಾಹುಲ್, ಸಂತ್ರಸ್ತನನ್ನು 6 ಕಿ.ಮೀ.ದೂರದ ಆಸ್ಪತ್ರೆಗೆ ಕರೆದೊಯ್ಯಲು 3 ತಾಸು ಯಾಕೆ ಬೇಕಾಯಿತು? ಯಾಕೆಂದರೆ ಅವರು ಚಹಾ ಕುಡಿಯುತ್ತಾ ಕೂತಿದ್ದರು. ಇದು ಮೋದಿಯ ನವ ಭಾರತ. ಇಲ್ಲಿ ಮಾನವೀಯತೆ ಬದಲಿಗೆ ಧ್ವೇಷವಿದೆ. ಇಲ್ಲಿ ಜನರನ್ನು ಥಳಿಸಿ ಸಾಯಿಸಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದರು.

ರಾಹುಲ್ ಟ್ವೀಟ್ ಗೆ ತಿರುಗೇಟು ನೀಡಿರುವ ಪಿಯೂಷ್ ಗೋಯಲ್, ಚುನಾವಣೆಯ ಲಾಭಕ್ಕೆ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಸಮಾಜ ಒಡೆಯಲು ಯತ್ನಿಸುತ್ತೀರಿ. ನಂತರ ಮೊಸಳೆ ಕಣ್ಣೀರು ಸುರಿಸುತ್ತೀರಿ. ನೀವೊಬ್ಬ ಧ್ವೇಷದ ವ್ಯಾಪಾರಿ ಎಂದಿದ್ದಾರೆ.

ಈ ನಡುವೆ ಥಳಿಸಿ ಹತ್ಯೆ ಪ್ರಕರಣವನ್ನು ಹತ್ತಿಕ್ಕಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಕಾರ್ಯದರ್ಶಿಗಳ ನೇತೃತ್ವದಲ್ಲಿ 2 ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಪ್ರಕರಣಗಳ ವಿವರಗಳನ್ನು ನೇರವಾಗಿ ಪ್ರಧಾನಿ ಮೋದಿಗೆ ನೀಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments