Webdunia - Bharat's app for daily news and videos

Install App

ಹಿಂಬಾಗಿಲ ಮೂಲಕ ಅಧಿಕಾರ ಪಡೆಯಲು ಕಾಂಗ್ರೆಸ್ ಯತ್ನ: ಮೋದಿ, ಶಾ ಟೀಕೆ

Webdunia
ಬುಧವಾರ, 16 ಮೇ 2018 (07:45 IST)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

40 ಸೀಟು ಹೊಂದಿದ್ದ ಬಿಜೆಪಿ ರಾಜ್ಯದಲ್ಲಿ ಈಗ 104 ಸ್ಥಾನಕ್ಕೇರಿದೆ. ಇದು ಬಿಜೆಪಿಯ ಗೆಲುವಲ್ಲವೇ? ಬಹುಮತವಿಲ್ಲ ಎಂದು ಕಾಂಗ್ರೆಸ್ ಸುಳ್ಳು ಪ್ರಚಾರ ನಡೆಸುತ್ತಿದೆ ಎಂದು ಅಮಿತ್ ಶಾ ಟೀಕೆ ಮಾಡಿದ್ದಾರೆ.

ಮತ್ತೊಂದೆಡೆ ಪ್ರಧಾನಿ ಮೋದಿ ಕೂಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನ್ನು ಕರ್ನಾಟಕದಲ್ಲಿ ಜನ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಹಾಗಿದ್ದರೂ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ. ಈ ನಡುವೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಮೋದಿ, ಶಾ ಧನ್ಯವಾದ ಸಲ್ಲಿಸಿದ್ದಾರೆ.

ಅಲ್ಲದೆ, ಉರಿಬಿಸಿಲಿದ್ದರೂ ಕರ್ನಾಟಕದ ಜನತೆ ತಮ್ಮ ಸಮಾವೇಶಗಳಿಗೆ ಬಂದಿದ್ದನ್ನು ಸ್ಮರಿಸಿಕೊಂಡರು. ಅಷ್ಟೇ ಅಲ್ಲ, ಯಾವ ಭಾಷೆಯಲ್ಲಿ ಬೇಕಾದರೂ ಮಾತನಾಡಿ ಎಂದು ಹೃದಯವಂತಿಕೆ ಮೆರೆದ ಕನ್ನಡಿಗರಿಗೆ ಮೋದಿ ಧನ್ಯವಾದ ಸಮರ್ಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments