ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ

Webdunia
ಬುಧವಾರ, 14 ಜುಲೈ 2021 (11:58 IST)
ನವದೆಹಲಿ(ಜು.14): ಕೊರೋನಾ ಸಂಕಷ್ಟದ ನಡುವೆ ಕೇಂದ್ರ ಸರ್ಕಾರ ದೇಶದಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಗೆ ತೊಡಕಾಗದಂತೆ ನೋಡಿಕೊಂಡಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಬರೋಬ್ಬರಿ 1,500 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆ ಹಾಗೂ ಅಡಿಪಾಯ ಕಾರ್ಯಕ್ರಮಕ್ಕೆ ವಾರಣಾಸಿಗೆ ಭೇಟಿ ನೀಡಲಿದ್ದಾರೆ.


•             1500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಅಡಿಪಾಯ
•             ಜುಲೈ 15 ರಂದು ಸ್ವಕ್ಷೇತ್ರ ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ
•             11 ಗಂಟೆಗೆ ಮೋದಿ ಕಾರ್ಯಕ್ರಮ ಆರಂಭ

ಜುಲೈ 15 ರಂದು ಮೋದಿ ವಾರಣಾಸಿಗೆ ಭೇಟಿ ನೀಡಲಿದ್ದಾರೆ.  ಬೆಳಿಗ್ಗೆ 11 ಗಂಟೆಗೆ, BHUನಲ್ಲಿ 100 ಹಾಸಿಗೆಗಳ MCH ವಿಂಗ್, ಗೋದೌಲಿಯಾದಲ್ಲಿ ಮಲ್ಟಿ-ಲೆವೆಲ್ ಪಾರ್ಕಿಂಗ್, ಗಂಗಾ ನದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೋ-ರೋ ಹಡಗುಗಳು ಮತ್ತು ವಾರಣಾಸಿ ಘಾಜಿಪುರದ ಮೂರು ಲೇನ್ ಫ್ಲೈಓವರ್ ಸೇತುವೆ ಸೇರಿದಂತೆ ವಿವಿಧ ಸಾರ್ವಜನಿಕ ಯೋಜನೆಗಳು ಮತ್ತು ಕಾರ್ಯಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.
ಸುಮಾರು ರೂ. 744 ಕೋಟಿ ವೆಚ್ಚದ ಹೆದ್ದಾರಿಯನ್ನು ಮೋದಿ ಉದ್ಘಾಟಿಸಲಿದ್ದಾರೆ.  ಇದರ ಜೊತೆಗೆ  839 ಕೋಟಿ ರೂಪಾಯಿ ಮೊತ್ತದ ಹಲವಾರು ಯೋಜನೆಗಳು ಮತ್ತು ಲೋಕೋಪಯೋಗಿ ಯೋಜನೆಗೆ ಅಡಿಪಾಯ ಹಾಕಲಿದ್ದಾರೆ.  ಸೆಂಟರ್ ಫಾರ್ ಸ್ಕಿಲ್ ಅಂಡ್ ಟೆಕ್ನಿಕಲ್ ಸಪೋರ್ಟ್ ಆಫ್ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ (ಸಿಪೆಟ್), ಜಲ ಜೀವನ್ ಮಿಷನ್ ಅಡಿಯಲ್ಲಿ 143 ಗ್ರಾಮೀಣ ಯೋಜನೆಗಳು ಮತ್ತು  ಮಾವು ಮತ್ತು ತರಕಾರಿ ಸಂಯೋಜಿತ ಪ್ಯಾಕ್ ಹೌಸ್ ಸೇರಿದಂತೆ ಪ್ರಮುಖ ಯೋಜನೆ ಸೇರಿಕೊಂಡಿವೆ.
ಮಧ್ಯಾಹ್ನ 12: 15 ಗಂಟೆಗೆ ಜಪಾನಿನ ನೆರವಿನೊಂದಿಗೆ ನಿರ್ಮಿಸಲಾಗಿರುವ ಅಂತರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರ - ರುದ್ರಕಾಶ್  ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ, ಅವರು ತಾಯಿಯ ಮತ್ತು ಮಕ್ಕಳ ಆರೋಗ್ಯ ವಿಭಾಗ, ಬಿಎಚ್ಯು ಪರಿಶೀಲಿಸಲಿದ್ದಾರೆ. ಕೋವಿಡ್ ಸನ್ನದ್ಧತೆಯನ್ನು ಪರಿಶೀಲಿಸಲು ಅವರು ಅಧಿಕಾರಿಗಳು ಮತ್ತು ವೈದ್ಯಕೀಯ ವೃತ್ತಿಪರರನ್ನು ಭೇಟಿ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments