ಭಾರತದಲ್ಲಿ ಕಡುಬಡವರ ಸಂಖ್ಯೆ ಇಳಿಕೆ!

Webdunia
ಮಂಗಳವಾರ, 19 ಏಪ್ರಿಲ್ 2022 (11:32 IST)
ನವದೆಹಲಿ : ಭಾರತದಲ್ಲಿ ಕಡುಬಡತನ 2011-2019ರ ಅವಧಿಯಲ್ಲಿ ಶೇ.12.3ರಷ್ಟುಇಳಿಕೆಯಾಗಿದೆ.

2011ರಲ್ಲಿ ಶೇ.22.5ರಷ್ಟಿದ್ದ ಕಡುಬಡವರ ಸಂಖ್ಯೆ 2019ರಲ್ಲಿ ಶೇ.10.2ಕ್ಕೆ ಕುಸಿದಿದೆ ಎಂದು ವಿಶ್ವಬ್ಯಾಂಕ್ನ ಸಂಶೋಧನಾ ವರದಿಯೊಂದು ತಿಳಿಸಿದೆ.

ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕೂಡ ಭಾರತದಲ್ಲಿ ಕಡುಬಡತನ ಬಹುತೇಕ ನಿರ್ಮೂಲನೆಯಾಗಿದೆ. ಸರ್ಕಾರಗಳು ಉಚಿತ ಆಹಾರ ಪೂರೈಸುತ್ತಿರುವುದರಿಂದ ಭಾರತದಲ್ಲಿನ ತೀವ್ರತರ ಬಡತನ ಕಳೆದ 40 ವರ್ಷಗಳಲ್ಲೇ ಈಗ ಕನಿಷ್ಠಕ್ಕೆ ಕುಸಿದಿದೆ ಎಂದು ಹೇಳಿತ್ತು.

ಅದರ ಬೆನ್ನಲ್ಲೇ ಈಗ ವಿಶ್ವಬ್ಯಾಂಕ್ ಕೂಡ ಭಾರತದಲ್ಲಿ ಕಡುಬಡವರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಕುಸಿದಿರುವ ಬಗ್ಗೆ ಹೇಳಿರುವುದು ಆಶಾಭಾವನೆ ಮೂಡಿಸಿದೆ.

ವಿಶೇಷವೆಂದರೆ, ಭಾರತದ ನಗರ ಪ್ರದೇಶಗಳಿಗಿಂತ ಹೆಚ್ಚಾಗಿ ಗ್ರಾಮೀಣ ಪ್ರದೇಶದಲ್ಲಿ ಬಡತನ ಇಳಿಕೆಯ ಪ್ರಮಾಣ ಹೆಚ್ಚಿದೆ. ನಗರ ಪ್ರದೇಶಗಳಲ್ಲಿ ಬಡತನ ಕುಸಿತದ ಪ್ರಮಾಣ ಶೇ.7.9 ಇದ್ದರೆ ಗ್ರಾಮೀಣ ಪ್ರದೇಶದಲ್ಲಿ ಶೇ.14.7ರಷ್ಟಿದೆ.

‘ಭಾರತದಲ್ಲಿ ಬಡವರ ಸಂಖ್ಯೆ ಇಳಿಕೆಯಾಗಿದೆ. ಆದರೆ, ಈ ಹಿಂದೆ ಅಂದುಕೊಂಡಷ್ಟುಪ್ರಮಾಣದಲ್ಲಿ ಇಳಿಕೆಯಾಗಿಲ್ಲ’ ಎಂದೂ ವರದಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments