Webdunia - Bharat's app for daily news and videos

Install App

ಶಕ್ತಿ ಯೋಜನೆಗೆ ಭಾನುವಾರ ಚಾಲನೆ

Webdunia
ಶನಿವಾರ, 10 ಜೂನ್ 2023 (11:06 IST)
ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಭಾನುವಾರ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಲಿದ್ದಾರೆ. ಕೇವಲ ಸಿದ್ದರಾಮಯ್ಯ ಸರ್ಕಾರದ ಮಂತ್ರಿಮಂಡಲದವರು ಮಾತ್ರವಲ್ಲ, ಡಿ.ವಿ.ಸದಾನಂದಗೌಡ, ತೇಜಸ್ವಿಸೂರ್ಯ ಸೇರಿದಂತೆ ಬಿಜೆಪಿ ಸಂಸದರಿಗೂ ಆಹ್ವಾನ ನೀಡಲಾಗಿದೆ.

ನಾಳೆಯ ಶಕ್ತಿ ಯೋಜನೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲು ಸರ್ಕಾರ ಸಿದ್ದತೆ ಮಾಡಿದೆ. ಬಸ್ನಲ್ಲಿ ಸಿದ್ದರಾಮಯ್ಯ ನಾಲ್ಕು ಕಿಲೋಮೀಟರ್ವರೆಗೂ ರೌಂಡ್ಸ್ ಹಾಕಲಿದ್ದು, ಬಿಎಂಟಿಸಿಯ ಬಿಎ-6 ಬಸ್ನಲ್ಲಿ ಸಂಚರಿಸಲಿದ್ದಾರೆ. ನಾಲ್ಕು ಸಾರಿಗೆ ನಿಗಮಗಳ ಎಂಟು ಬಸ್ಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಒಂದು ನಿಗಮದಿಂದ ಎರಡು ಬಸ್ಗಳಿಗೆ ವಿಧಾನಸೌಧ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಸಿಎಂ ಹಾಗೂ ಮಂತ್ರಿಮಂಡಲ ವಿಧಾನಸೌಧ ಟು ವಿಧಾನಸೌಧಕ್ಕೆ ಬಸ್ನಲ್ಲಿ ಸಂಚಾರಿಸಲಿದ್ದಾರೆ. 

ವಿಧಾನಸೌಧ-ಎಂಎಸ್ ಬಿಲ್ಡಿಂಗ್-ಮೈಸೂರು ಬ್ಯಾಂಕ್ ಸರ್ಕಲ್-ಮೆಜೆಸ್ಟಿಕ್- ವಿಧಾನಸೌಧಕ್ಕೆ ಬಸ್ ಸಂಚರಿಸಲಿದೆ. ಪ್ರಥಮ ಫ್ರೀ ಟಿಕೆಟ್ ಸಿಎಂ ಸಿದ್ದರಾಮಯ್ಯ ವಿತರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments