Select Your Language

Notifications

webdunia
webdunia
webdunia
webdunia

ಚಿಂತಕ ಭಗವಾನ್ ಹಾಗೂ ನಟ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದ ಪ್ರಹ್ಲಾದ್ ಜೋಶಿ

ಧಾರವಾಡ
ಧಾರವಾಡ , ಭಾನುವಾರ, 7 ಅಕ್ಟೋಬರ್ 2018 (08:46 IST)
ಧಾರವಾಡ : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ರಾಕ್ಷಸ ರೂಪದ ಮಹಿಷಾಸುರನ ವಿಗ್ರಹ ಕೆಡವುವಂತೆ ಪ್ರೊ. ಭಗವಾನ್ ಆಗ್ರಹಿಸಿರುವ ಹಿನ್ನಲೆಯಲ್ಲಿ  ಸಂಸದ ಪ್ರಹ್ಲಾದ್ ಜೋಶಿ ಅವರು ಪೊಲೀಸರು ಚಿಂತಕ ಕೆ.ಎಸ್. ಭಗವಾನ್ ಹಾಗೂ ನಟ ಪ್ರಕಾಶ್ ರೈ ಅವರ ಮೇಲೆ ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವಾನ್ ಮತ್ತು ಪ್ರಕಾಶ್ ರೈ ಅವರು ಹುಚ್ಚುಚ್ಚರಾಗಿ ಮಾತಾಡ್ತಾ ಇದ್ದಾರೆ. ಅವರಿಗೆ ಯಾವುದೇ ಸಾಮಾಜಿಕ ಕಾಳಜಿ ಇಲ್ಲ. ಅವರಿಗೆ ನಂಬಿಕೆಗಳು ಇಲ್ಲವಾದರೆ ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳಬೇಕು. ಮತ್ತೊಬ್ಬರ ವಿಚಾರದ ಕುರಿತು ನಂಬಿಕೆ ಇಲ್ಲದ ಬಗ್ಗೆ ಯಾಕೆ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದಾರೆ.


ಅವರಿಬ್ಬರು ಪ್ರಚಾರದ ತೆವಲಿನಿಂದ ಮಾತನಾಡುತ್ತಿದ್ದಾರೆ, ಅವರಿಗೆ ಧೈರ್ಯವಿದ್ದರೆ ಬೇರೆ ಧರ್ಮದ ಖುರಾನ್ ಮತ್ತು ಬೈಬಲ್ ಬಗ್ಗೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿದ ಹುಡುಗನ ಜೊತೆ ಓಡಿ ಹೋಗಿದ್ದಕ್ಕೆ ಗ್ರಾಮಸ್ಥರೆಲ್ಲಾ ಸೇರಿ ಯುವತಿಗೆ ಮಾಡಿದ್ದೇನು ಗೊತ್ತಾ?