Select Your Language

Notifications

webdunia
webdunia
webdunia
webdunia

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ
ನವದೆಹಲಿ , ಶುಕ್ರವಾರ, 20 ಆಗಸ್ಟ್ 2021 (10:21 IST)
ನವದೆಹಲಿ: ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ.

ಸಂವಿಧಾನದ 105 ನೇ ತಿದ್ದುಪಡಿಯ ಈ ಮಸೂದೆಯನ್ನು ಒಬಿಸಿ ಮಸೂದೆಯೆಂದೇ ಹೇಳಲಾಗುತ್ತದೆ. ಆ.11 ರಂದು ಸಂಸತ್ ನಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿತ್ತು.
ಕಾನೂನು ಮತ್ತು ನ್ಯಾಯ ಸಚಿವಾಲಯ ಪ್ರಕಟಿಸುವ ಗೆಝೆಟ್ ನ ಪ್ರಕಾರ ಈ ಕಾಯ್ದೆ ಸಂವಿಧಾನದ ಉಪವಾಕ್ಯ (clause 9) ಅಡಿಯಲ್ಲಿನ ಆರ್ಟಿಕಲ್ 338 ಬಿಯನ್ನು ತಿದ್ದುಪಡಿ ಮಾಡಲಿದೆ ಎಂದು ಹೇಳಿತ್ತು.
ಈ ತಿದ್ದುಪಡಿಯ ಮೂಲಕ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಕಾನೂನು ಸಮ್ಮತವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದ ವರ್ಗಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರವನ್ನು ಪಡೆಯಲಿದ್ದು ಕೇಂದ್ರದ ಪಟ್ಟಿಗಿಂತಲೂ ಭಿನ್ನವಾದ ಪಟ್ಟಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಸಂಸತ್ ನ ಉಭಯ ಸದನಗಳಲ್ಲೂ ಒಬಿಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದನ್ನು ಶ್ಲಾಷಿಸಿದ ಪ್ರಧಾನಿ ನರೇಂದ್ರ ಮೋದಿ ದೇಶದ ಪಾಲಿನ ಹೆಗ್ಗುರುತಿನ ಕ್ಷಣ ಎಂದು ಹೇಳಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಗುಜರಾತ್ನ ಸೋಮನಾಥದಲ್ಲಿ ವಿವಿಧ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ