ಇಂದಿನಿಂದ ತರಕಾರಿ, ಹಾಲಿನ ಬೆಲೆ ಹೆಚ್ಚಳ !

Webdunia
ಮಂಗಳವಾರ, 1 ಆಗಸ್ಟ್ 2023 (10:04 IST)
ಬೆಂಗಳೂರು : ಅಲ್ಲಿ ಬಂತು, ಇಲ್ಲಿ ಹೋಯ್ತು ಎಂಬಂತೆ, ಆಗಸ್ಟ್ ತಿಂಗಳಿಂದ ಇನ್ನೂರು ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲಿರುವ ಕರ್ನಾಟಕದ ಜನರಿಗೆ ಈ ತಿಂಗಳಿಂದ ಬೇರೆ ಬೆಲೆ ಏರಿಕೆಗಳ ಬಿಸಿ ತಾಕಲಿದೆ.
 
ಆಗಸ್ಟ್ 1ರಿಂದ ಹಾಲು, ತರಕಾರಿ ಇತ್ಯಾದಿ ವಸ್ತುಗಳು ದುಬಾರಿಯಾಗಲಿವೆ. ಕೆಲವೊಂದು ವಲಯದ ಬೆಲೆ ಏರಿಕೆಯು ಬೇರೆ ಬೇರೆ ಕ್ಷೇತ್ರಗಳಲ್ಲಿ ಬೆಲೆ ಏರಿಕೆಗೆ ಪರೋಕ್ಷವಾಗಿ ಎಡೆ ಮಾಡಿಕೊಡುತ್ತದೆ. ಯಾವ್ಯಾವ ವಸ್ತುಗಳು ಮತ್ತು ಸೇವೆಗಳು ಕರ್ನಾಟಕದಲ್ಲಿ ಆಗಸ್ಟ್ 1ರಿಂದ ದುಬಾರಿಯಾಗಬಹುದು, ಇಲ್ಲಿದೆ ವಿವರ.

ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್ನ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲು ನಿರ್ದರಿಸಿದೆ. ಆಗಸ್ಟ್ 1ರಿಂದ ನಂದಿನಿ ಹಾಲು ಲೀಟರ್ಗೆ 3 ರೂನಷ್ಟು ದುಬಾರಿ ಆಗಲಿದೆ. ಕೆಎಂಫ್ ಸಂಸ್ಥೆ 5 ರೂನಷ್ಟು ದರ ಹೆಚ್ಚಳ ಮಾಡುವ ಪ್ರಸ್ತಾಪ ಮುಂದಿಟ್ಟಿತ್ತು. ಸರ್ಕಾರ ಬೆಲೆ ಏರಿಕೆಯನ್ನು 3 ರುಪಾಯಿಗೆ ಇಳಿಸಿದೆ. ಈ ಬೆಲೆ ಏರಿಕೆಯ ಲಾಭವನ್ನು ಸಂಪೂರ್ಣವಾಗಿ ಉತ್ಪಾದಕರಿಗೆ (ರೈತರು) ವರ್ಗಾಯಿಸುವುದಾಗಿ ಕೆಎಂಎಫ್ ಹೇಳಿದೆ.

ಟೊಮೆಟೋ ಬೆಲೆ ಏರಿದ್ದರಿಂದ ಕನ್ನಡಿಗರನ್ನು ಕಂಗಾಲಾಗಿರುವುದು ಹೌದು. ಪಕ್ಕದ ಕೋಲಾರದಲ್ಲಿ ಭರ್ಜರಿಯಾಗಿ ಟೊಮೆಟೋ ಬೆಳೆಯಲಾಗಿದ್ದರೂ ಬೆಂಗಳೂರಿನಲ್ಲಿ ಟೊಮೆಟೋ ಬೆಲೆ 200 ರೂವರೆಗೂ ಹೋಗಿತ್ತು. ಈಗಲೂ ಕೂಡ 150 ರೂ ಆಸುಪಾಸಿನಲ್ಲಿ ಟೊಮೆಟೋ ಬೆಲೆ ಇದೆ. ಹಸಿರು ಮೆಣಸಿನಕಾಯಿ, ಶುಂಠಿ, ಕ್ಯಾರಟ್, ಬೀನ್ಸ್, ಬಟಾಣಿ ಇತ್ಯಾದಿ ತರಕಾರಿಗಳ ಬೆಲೆಗಳೂ ಕೂಡ ಎರಡು ಪಟ್ಟು ಹೆಚ್ಚಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments