Webdunia - Bharat's app for daily news and videos

Install App

ಇಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ

Webdunia
ಮಂಗಳವಾರ, 1 ಮೇ 2018 (07:23 IST)
ಉಡುಪಿ : ಪಕ್ಷದ ಪರ ಪ್ರಚಾರ ಮಾಡಲು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ಉಡುಪಿಗೆ ಆಗಮಿಸಲಿದ್ದಾರೆ.


ಈ ಹಿನ್ನಲೆಯಲ್ಲಿ ಉಡುಪಿಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ ನಿಷೇಧ ಮಾಡಲಾಗಿದೆ. ಎಂಜಿಎಂ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯಲಿರುವ ಕಾರಣ ಕರಾವಳಿ ಜಂಕ್ಷನ್ ನಿಂದ ಇಂದ್ರಾಣಿ ಜಂಕ್ಷನ್ ವರೆಗೆ ಪೊಲೀಸರು ನೋ ವೆಹಿಕಲ್ ಝೋನ್ ನಿರ್ಮಾಣ ಮಾಡುತ್ತಾರೆ. ಸಾರ್ವಜನಿಕರಿಗೆ ತೊಂದರೆ ಆಗದಿರಲು ನಗರದ ಹೊರ ವಲಯದ ಮೂಲಕ ಬದಲಿ ರಸ್ತೆಗಳ ವ್ಯವಸ್ಥೆಯನ್ನು ಮಾಡಲಾಗಿದೆ.


ಈ ಕುರಿತು ಮಾಹಿತಿ ನೀಡಿರುವ ಉಡುಪಿ ಎಸ್ ಪಿ ಲಕ್ಷ್ಮಣ ಬ. ನಿಂಬರ್ಗಿ ಪ್ರಧಾನಿ ಮೋದಿ ಆಗಮನದಿಂದ ನಗರದಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ನಗರದಲ್ಲಿ ಮತ್ತು ಪ್ರಧಾನಿ ಸಂಚರಿಸುವ ರಸ್ತೆಗಳ ಇಕ್ಕೆಲದ ಯಾವುದೇ ಅಂಗಡಿಗಳನ್ನು ಮುಚ್ಚಿಸುವುದಿಲ್ಲ. ಸಾರ್ವಜನಿಕ ಸಭೆಯಲ್ಲಿ ಮಾತ್ರ ಮಾಧ್ಯಮಗಳು ಪಾಲ್ಗೊಳ್ಳಬಹುದು ಎಂದು ಎಸ್‍ಪಿ ಮಾಹಿತಿ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

World Nutrition Day: ಯಾವ ಪೋಷಕಾಂಶ ಕೊರತೆಯಾದ್ರೆ ಯಾವ ಲಕ್ಷಣಗಳು ಇರುತ್ತವೆ ನೋಡಿ

ನಮ್ಮ ಸರ್ಕಾರ ಜಾತಿ ನೋಡಲ್ಲ, ಅಭಿವೃದ್ಧಿಯೊಂದೇ ನಮ್ಮ ಗುರಿ: ಸಿದ್ದರಾಮಯ್ಯ

ಬಾನು ಮುಷ್ತಾಕ್ ಗೂ ನಿಸಾರ್ ಅಹ್ಮದ್ ಗೂ ಹೇಗ್ರೀ ಹೋಲಿಸ್ತೀರಿ: ಸಿದ್ದರಾಮಯ್ಯಗೆ ನೆಟ್ಟಿಗರ ತರಾಟೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿರುವವರ ಮನೆಗೂ ಭೇಟಿ ಕೊಡಿ: ನಿಖಿಲ್ ಕುಮಾರಸ್ವಾಮಿಗೆ ಟಾಂಗ್

Karnataka Weather: ಈ ವಾರ ತಗ್ಗಲಿದೆಯೇ ಮಳೆಯ ಅಬ್ಬರ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments