Webdunia - Bharat's app for daily news and videos

Install App

ಇಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ

Webdunia
ಮಂಗಳವಾರ, 1 ಮೇ 2018 (07:23 IST)
ಉಡುಪಿ : ಪಕ್ಷದ ಪರ ಪ್ರಚಾರ ಮಾಡಲು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ಉಡುಪಿಗೆ ಆಗಮಿಸಲಿದ್ದಾರೆ.


ಈ ಹಿನ್ನಲೆಯಲ್ಲಿ ಉಡುಪಿಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ ನಿಷೇಧ ಮಾಡಲಾಗಿದೆ. ಎಂಜಿಎಂ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯಲಿರುವ ಕಾರಣ ಕರಾವಳಿ ಜಂಕ್ಷನ್ ನಿಂದ ಇಂದ್ರಾಣಿ ಜಂಕ್ಷನ್ ವರೆಗೆ ಪೊಲೀಸರು ನೋ ವೆಹಿಕಲ್ ಝೋನ್ ನಿರ್ಮಾಣ ಮಾಡುತ್ತಾರೆ. ಸಾರ್ವಜನಿಕರಿಗೆ ತೊಂದರೆ ಆಗದಿರಲು ನಗರದ ಹೊರ ವಲಯದ ಮೂಲಕ ಬದಲಿ ರಸ್ತೆಗಳ ವ್ಯವಸ್ಥೆಯನ್ನು ಮಾಡಲಾಗಿದೆ.


ಈ ಕುರಿತು ಮಾಹಿತಿ ನೀಡಿರುವ ಉಡುಪಿ ಎಸ್ ಪಿ ಲಕ್ಷ್ಮಣ ಬ. ನಿಂಬರ್ಗಿ ಪ್ರಧಾನಿ ಮೋದಿ ಆಗಮನದಿಂದ ನಗರದಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ನಗರದಲ್ಲಿ ಮತ್ತು ಪ್ರಧಾನಿ ಸಂಚರಿಸುವ ರಸ್ತೆಗಳ ಇಕ್ಕೆಲದ ಯಾವುದೇ ಅಂಗಡಿಗಳನ್ನು ಮುಚ್ಚಿಸುವುದಿಲ್ಲ. ಸಾರ್ವಜನಿಕ ಸಭೆಯಲ್ಲಿ ಮಾತ್ರ ಮಾಧ್ಯಮಗಳು ಪಾಲ್ಗೊಳ್ಳಬಹುದು ಎಂದು ಎಸ್‍ಪಿ ಮಾಹಿತಿ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments